6:48 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಸೋತ ಪ್ರತಾಪಗೌಡ ಪಾಟೀಲ್ ಗೆ ಸಚಿವ ಸ್ಥಾನ:  ಅಭಿಮಾನಿಗಳ ಆಗ್ರಹದ ಆಡಿಯೋ ವೈರಲ್

20/05/2021, 12:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com
ಮಸ್ಕಿಉಪಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಸೋಲಿನ ಹಿಂದೆ ಕಾಣದ  ಕೈಗಳು ಇದ್ದು, ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡಿ ಸಚಿವ ಪದವಿ ನೀಡುವಂತೆ ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಈ ನಿಟ್ಟಿನಲ್ಲಿ ಧ್ವನಿ ಸುರುಳಿಯ ಸಣ್ಣ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಸ್ಕಿ ಕ್ಷೇತ್ರದ ಮಾಜಿ ಶಾಸಕರ ಪ್ರತಾಪ ಗೌಡ ಪಾಟೀಲ್ ಅಭಿಮಾನಿಗಳು ಮುಖ್ಯಮಂತ್ರಿಯನ್ನು ಆಗ್ರಹಿಸುವ ಧ್ವನಿ ಸುರುಳಿ ಇದಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರೇ ಇವತ್ತು ನೀವು ಸಿಎಂ ಕುರ್ಚಿ ಮೇಲೆ ಕೂರುವುದಕ್ಕೆ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪ ಗೌಡರ ಪಾತ್ರ ಬಹುಮುಖ್ಯ. ಉಪಚುನಾವಣೆಯಲ್ಲಿ ಅವರು ಸೋತಿರಬಹುದು. ಆದರೆ ನೀವು ಸೋತವರನ್ನು ಸಚಿವರನ್ನಾಗಿ ಮಾಡಿದ್ದೀರಿ. ಅಲ್ಲದೆ ಉಪಮುಖ್ಯಮಂತ್ರಿ ಕೂಡ ಮಾಡಿದ್ದೀರಿ. ಪ್ರತಾಪಗೌಡ ಪಾಟೀಲ್ ಅವರನ್ನು ಎಂಎಲ್ಸಿ ಮಾಡಿ ಸಚಿವ ಸ್ಥಾನ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಕೇಳಿಬರುತ್ತಿದೆ. ಮತದಾರರು ಈ ಸಲ ಪ್ರತಾಪ ಗೌಡರನ್ನು ಕೈ ಬಿಟ್ಟಿರಬಹುದು. ಆದರೆ ಸರಕಾರ ತರುವುದರಲ್ಲಿ ಅವರ ಪಾತ್ರ ಬಹಳ ಮುಖ್ಯ. 17 ಜನರಲ್ಲಿ ಇವರದು ಒಂದು ಪಾತ್ರ ಇದೆ. ಮೈತ್ರಿ ಸರಕಾರ ಬೀಳಿಸುವಲ್ಲಿ ಇದ್ದ 17 ಜನರಲ್ಲಿ ಇವರು ಒಬ್ಬರು. ಪ್ರತಾಪ್ ಗೌಡ ಪಾಟೀಲ್ 

ಅವರನ್ನು ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ನಾವು ಎಲ್ಲಿ ಎಡವಿದ್ದೇವೆ, ತಪ್ಪು ಮಾಡಿದ್ದೇವೆ ಇದನ್ನೆಲ್ಲ ಮುಂಬರುವ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ. ಸೋಲಿನ ಹಿಂದೆ ಕಾಣದ ಕೈಗಳು ಇದ್ದು, ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ಮುಂಬರುವ ದಿನಗಳಲ್ಲಿ ನಾವು ಸರಿಪಡಿಸಿಕೊಳ್ಳುತ್ತೇವೆ. ಅಲ್ಲದೆ ಮುಖ್ಯಮಂತ್ರಿಗಳು ನಮ್ಮನ್ನು ಕೈಬಿಡುವುದಿಲ್ಲ ಎನ್ನುವ ಮಾತುಗಳು ಅಭಿಮಾನಿಗಳಿಂದ ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು