7:10 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಎಲ್ಲ ತಾಲೂಕು ಮಟ್ಟದ ಕಚೇರಿಗಳ ಆರಂಭ; ಕಂದಾಯ ಸಚಿವ ಸದನದಲ್ಲಿ ಭರವಸೆ: ಶಾಸಕ ತುರುವಿಹಾಳ

23/09/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರವಾಗಿ ಮಸ್ಕಿಯಲ್ಲಿ ಶೀಘ್ರದಲ್ಲಿ ಉಳಿದ ಎಲ್ಲ ತಾಲೂಕು ಮಟ್ಟದ ಕಚೇರಿಗಳು ಆರಂಭಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸದನದಲ್ಲಿ ತಮಗೆ ಭರವಸೆ ನೀಡಿದ್ದಾರೆ ಎಂದು ಶಾಸಕ ಆರ್. ಬಸವನಗೌಡ ತುರುವಿಹಾಳ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹೊಸ ತಾಲೂಕು ಆರಂಭ ಹಿನ್ನೆಲೆಯಲ್ಲಿ 3 ತಾಲೂಕಿನ ಹಳ್ಳಿಗಳು ಒಳಗೊಂಡಿದ್ದು ನೂತನ ತಾಲೂಕಿಗೆ ಕಚೇರಿಗಳ ಒತ್ತಾಯಿಸಿದ್ದು ಸಾರ್ವಜನಿಕರು ತಮ್ಮ ಕೆಲಸಕಾರ್ಯಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಇನ್ನುಳಿದ ಆಡಳಿತ ಕಚೇರಿಗಳ ಆರಂಭದ ಜತೆಗೆ ಮಿನಿ ವಿಧಾನಸೌಧ ನಿರ್ಮಾಣಕ್ಕೂ ಸರಕಾರ ಮುಂದಾಗಬೇಕೆಂದು ಸರಕಾರಕ್ಕೆ ಒತ್ತಾಯಿಸಿದ್ದರು.

ಸರಕಾರ ಸಚಿವ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಉಳಿದ ತಾಲೂಕು ಕಚೇರಿಗಳ ಆರಂಭದ ಜತೆಗೆ ಮಿನಿ ವಿಧಾನಸೌಧ ನಿರ್ಮಾಣಕ್ಕೂ ಕ್ರಮಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಭರವಸೆ ನೀಡಿದ್ದಾರೆ. ನೂತನ ತಾಲೂಕಿನಲ್ಲಿ ಅಗತ್ಯವಿರುವ ಕಚೇರಿಗಳನ್ನು ಬೇಗ ಆರಂಭಿಸುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಸದನದಲ್ಲಿ ಹೇಳಿದರು. 

ಇತ್ತೀಚಿನ ಸುದ್ದಿ

ಜಾಹೀರಾತು