11:45 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಎಲ್ಲ ತಾಲೂಕು ಮಟ್ಟದ ಕಚೇರಿಗಳ ಆರಂಭ; ಕಂದಾಯ ಸಚಿವ ಸದನದಲ್ಲಿ ಭರವಸೆ: ಶಾಸಕ ತುರುವಿಹಾಳ

23/09/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರವಾಗಿ ಮಸ್ಕಿಯಲ್ಲಿ ಶೀಘ್ರದಲ್ಲಿ ಉಳಿದ ಎಲ್ಲ ತಾಲೂಕು ಮಟ್ಟದ ಕಚೇರಿಗಳು ಆರಂಭಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸದನದಲ್ಲಿ ತಮಗೆ ಭರವಸೆ ನೀಡಿದ್ದಾರೆ ಎಂದು ಶಾಸಕ ಆರ್. ಬಸವನಗೌಡ ತುರುವಿಹಾಳ ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹೊಸ ತಾಲೂಕು ಆರಂಭ ಹಿನ್ನೆಲೆಯಲ್ಲಿ 3 ತಾಲೂಕಿನ ಹಳ್ಳಿಗಳು ಒಳಗೊಂಡಿದ್ದು ನೂತನ ತಾಲೂಕಿಗೆ ಕಚೇರಿಗಳ ಒತ್ತಾಯಿಸಿದ್ದು ಸಾರ್ವಜನಿಕರು ತಮ್ಮ ಕೆಲಸಕಾರ್ಯಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಇನ್ನುಳಿದ ಆಡಳಿತ ಕಚೇರಿಗಳ ಆರಂಭದ ಜತೆಗೆ ಮಿನಿ ವಿಧಾನಸೌಧ ನಿರ್ಮಾಣಕ್ಕೂ ಸರಕಾರ ಮುಂದಾಗಬೇಕೆಂದು ಸರಕಾರಕ್ಕೆ ಒತ್ತಾಯಿಸಿದ್ದರು.

ಸರಕಾರ ಸಚಿವ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಉಳಿದ ತಾಲೂಕು ಕಚೇರಿಗಳ ಆರಂಭದ ಜತೆಗೆ ಮಿನಿ ವಿಧಾನಸೌಧ ನಿರ್ಮಾಣಕ್ಕೂ ಕ್ರಮಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಭರವಸೆ ನೀಡಿದ್ದಾರೆ. ನೂತನ ತಾಲೂಕಿನಲ್ಲಿ ಅಗತ್ಯವಿರುವ ಕಚೇರಿಗಳನ್ನು ಬೇಗ ಆರಂಭಿಸುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಸದನದಲ್ಲಿ ಹೇಳಿದರು. 

ಇತ್ತೀಚಿನ ಸುದ್ದಿ

ಜಾಹೀರಾತು