3:58 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ

20/08/2021, 21:24

ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. 

ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬವು ಆಚರಣೆ ನಡೆಯಲಿಲ್ಲ. ಸರಕಾರ ಆದೇಶದಂತೆ ಸಂಜೆ 4 ಗಂಟೆಗೆ ದೇವರು ಕಳಿಸುವ ಕಾರ್ಯಕ್ರಮ ಪ್ರಾರಂಭಿಸಲಾಯಿತು. 

ಪ್ರತಿವರ್ಷದಂತೆ ಈ ವರ್ಷವೂ ಕೂಡ ಭಕ್ತ ತಮ್ಮ ಹರಕೆಗಳ ತೀರಿಸುತ್ತಾ, ಕೋವಿಡ್ ಇರುವುದರಿಂದ ಶಾಂತಿಯುತವಾಗಿ ಕಾರ್ಯಕ್ರಮ ನೆರವೇರಿಸಿದರು.

ದೇವರು ಕಂಬಾರ ಮನೆಗೆ ಹೋಗಿ ದರ್ಶನ ಮಾಡಿ ಬರೋದು ಮತ್ತು ಭಕ್ತರು ತಮ್ಮ ಹರಕೆಗಳನ್ನು ತೀರಿಸುವುದು ಇಲ್ಲಿನ ವಾಡಿಕೆ. ಮತ್ತೆ ದೇವರು ಹೋಳಿಗೆ ಹೋಗುವಾಗ ಬೆಂಕಿಯಲ್ಲಿ ದೇವರು ನಡೆದಾಡುವ ದೃಶ್ಯ ಆಕರ್ಷಣೀಯವಾದದ್ದು.

ಏನೇ ಆದರೂ ಈ ಬಾರಿ ಕೊರೊನಾ ಕರಿನೆರಳು ಹರಿದಂತೆ ಆಯ್ತು. ದೇವರ ಮನದಲ್ಲಿ ನೆನೆದು ತಮ್ಮ ಹರಕೆಗಳನ್ನು ತೀರಿಸುವ ಕಾರ್ಯಕ್ರಮ ನೆರವೇರಿತು. ಮಸ್ಕಿ ಪಟ್ಟಣ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಸರಳಾಗಿ

ಮೋಹರಂ ಹಬ್ಬ ಆಚರಣೆ ಮಾಡಲಾಯಿತು. ಸಂತೆ ಕೆಲ್ಲೂರು ಗ್ರಾಮದಲ್ಲಿ ಬೆಳಗ್ಗೆ 5 ಗಂಟೆಗೆ ದೇವರು ಅಲ್ಲಲ್ಲಿ ಬಿಲಾಲ್ ತೆಗೆದುಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ  ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು