4:45 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜನಾರ್ಧನ ರೆಡ್ಡಿ ನಿವಾಸದ ಮುಂದೆ ರೆಡ್ಡಿ ಬಣಗಳ ನಡುವೆ ಭಾರೀ ಘರ್ಷಣೆ; ಗುಂಡು ಹಾರಾಟ; ಓರ್ವ ಸಾವು

02/01/2026, 16:00

ಬಳ್ಳಾರಿ(reporterkarnataka.com): ಬ್ಯಾನರ್ ವಿವಾದ ಸಂಬಂಧಿಸಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಹಾಗೂ ಕಾಂಗ್ರೆಸ್ ನ ಗುಂಪುಗಳ ನಡುವೆ ಗುರುವಾರ ರಾತ್ರಿ ಭಾರೀ ಘರ್ಷಣೆ ನಡೆದಿದ್ದು, ಗುಂಡು ಹಾರಾಟಕ್ಕೆ ಓರ್ವ ಸಾವನ್ನಪ್ಪಿದ್ದಾರೆ.
ಗಣಿ ಉದ್ಯಮಿ ಮತ್ತು ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿಗೆ ಸಂಬಂಧಿಸಿದ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಜನಾರ್ಧನ ರೆಡ್ಡಿ ಅವರ ಆಪ್ತನ ಅಂಗರಕ್ಷಕ ಹಾರಿಸಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗ ರಾಜಶೇಖರ್ ಎಂದು ಗುರುತಿಸಲಾಗಿದೆ.


ಈ ನಡುವೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಕುಟುಂಬದವರು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ ನಂತರ ಪರಿಸ್ಥಿತಿ ತೀವ್ರಗೊಂಡಿತು. ಘಟನೆಯ ನಂತರ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪೊಲೀಸರ ಪ್ರಕಾರ, ಜನವರಿ 3ರಂದು ವಾಲ್ಮೀಕಿ ಜಯಂತಿ ಆಚರಿಸಲು ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್‌ಗಳನ್ನು ಅಳವಡಿಸಲು ಯತ್ನಿಸಿದಾಗ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಹೊರಗೆ ಬ್ಯಾನರ್ ಸಂಬಂಧಿತ ವಿಷಯದ ಬಗ್ಗೆ ಘರ್ಷಣೆ ಸಂಭವಿಸಿದೆ. ಜನಾರ್ದನ ರೆಡ್ಡಿ ಬೆಂಬಲಿಗರು ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದರು. ಇದು ಘರ್ಷಣೆಗೆ ಕಾರಣವಾಯಿತು, ನಂತರ ಕಲ್ಲು ತೂರಾಟ ನಡೆಯಿತು.
ಘಟನೆ ತಿಳಿಯುತ್ತಿದ್ದಂತೆ ಮಾಜಿ ಸಚಿವ, ಬಿಜೆಪಿಯ ಹಿರಿಯ ಮುಖಂಡ ಬಿ.ಶ್ರೀರಾಮುಲು ಸ್ಥಳಕ್ಕೆ ದೌಡಾಯಿಸಿದ್ದು, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರೂ, ಘರ್ಷಣೆ ಮುಂದುವರಿಯಿತು.

ಇತ್ತೀಚಿನ ಸುದ್ದಿ

ಜಾಹೀರಾತು