11:08 PM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮತಾಂತರ ನಿಷೇಧ ಕಾಯ್ದೆಗೆ ಸಚಿವ ಸಂಪುಟ ಅನುಮೋದನೆ: ಇಂದು ಅಧಿವೇಶನದಲ್ಲಿ ಮಂಡನೆ ಬಹುತೇಕ ಖಚಿತ

21/12/2021, 11:10

ಬೆಳಗಾವಿ(reporterkarnataka.com) :

ಮತಾಂತರ ನಿಷೇಧ ಮಸೂದೆಗೆ ಕರ್ನಾಟಕ ಸರಕಾರದ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಡಿಸೆಂಬರ್ 21ರಂದು ವಿಧಾನಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಪ್ರಮುಖ ನಿರ್ಧಾರವನ್ನೂ ಮಡಲಾಗಿದೆ.

ಬಿಜೆಪಿ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಆದರೆ ವಿಧಾನ ಪರಿಷತ್ತಿನಲ್ಲಿ ಈ ಮಸೂದೆ ಪಾಸ್‌ ಆಗಲು ಜೆಡಿಎಸ್ ಸದಸ್ಯರ ಬೆಂಬಲ ಅನಿವಾರ್ಯವಾಗಿದೆ. ಎರಡು ಸದನಗಳಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ಈ ಬೆಳಗಾವಿ ಅಧಿವೇಶನದಲ್ಲಿಯೇ ಅನುಮೋದನೆ ಪಡೆಯಲು ಬಿಜೆಪಿ ಸರ್ಕಾರದ ಚಿಂತನೆನಡೆಸಿದ್ದು, ಒಂದಿಷ್ಟು ಮಾರ್ಪಾಡುಗಳೊಂದಿಗೆ ಯಥಾವತ್ತಾಗಿ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.

.ವಿರೋಧ ಪಕ್ಷಗಳು ಮತ್ತು ಕ್ರೈಸ್ತ ಸಮುದಾಯದ ಮುಖಂಡರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಪ್ರಸ್ತಾವಿತ ಮಸೂದೆಯು ದಂಡದ ನಿಬಂಧನೆಗಳನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು ಎರಡು ತಿಂಗಳ ಮೊದಲು ಡೆಪ್ಯೂಟಿ ಕಮಿಷನರ್ ಮುಂದೆ ಅರ್ಜಿಯನ್ನು ಸಲ್ಲಿಸಬೇಕೆಂದು ಷರತ್ತು ವಿಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳವಾರ ವಿಧೇಯಕ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ಆರ್ ಅಶೋಕ್ ಸೇರಿದಂತೆ ಹಲವು ಸಚಿವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು