8:07 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ: ಚಿಲುವೆ ಸಂಸ್ಥೆ ವಿರುದ್ಧ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

03/10/2023, 17:52

ಬೆಂಗಳೂರು(reporterkarnataka.com): ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ ಹೊತ್ತಿರುವ ಚಿಲುಮೆ ಸಂಸ್ಥೆ ಇದೀಗ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಲುಮೆ ಎಂಬ ಸಂಸ್ಥೆಯು ಮತದಾರರ ಜಾಗೃತಿ ಹಾಗೂ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಸಂಗ್ರಹ ಮಾಡಿದೆ ಎಂಬ ಆರೋಪವಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಕ್ಕೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಅವರು ತನಿಖೆ ನಡೆಸುವಂತೆ ಕೋರಿದ್ದರು. ಈ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಸಿ, ವಿವರವಾದ ವರದಿ ಸಲ್ಲಿಸುವಂತೆ ಸಿಎಂ ಸೂಚಿಸಿದ್ದಾರೆ.
ಬಿಬಿಎಂಪಿಯಿಂದ ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಎಂದು ಗುರುತಿನ ಚೀಟಿ ಹಾಕಿಕೊಂಡು ಈ ಅಕ್ರಮ ಎಸೆಯಲಾಗಿದೆ. ಈ ಅಕ್ರಮದ ಹಿಂದೆ ಸಚಿವರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು