2:42 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ: ಚಿಲುವೆ ಸಂಸ್ಥೆ ವಿರುದ್ಧ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

03/10/2023, 17:52

ಬೆಂಗಳೂರು(reporterkarnataka.com): ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ ಹೊತ್ತಿರುವ ಚಿಲುಮೆ ಸಂಸ್ಥೆ ಇದೀಗ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಲುಮೆ ಎಂಬ ಸಂಸ್ಥೆಯು ಮತದಾರರ ಜಾಗೃತಿ ಹಾಗೂ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಸಂಗ್ರಹ ಮಾಡಿದೆ ಎಂಬ ಆರೋಪವಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಕ್ಕೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್‌ ಬಾಬು ಅವರು ತನಿಖೆ ನಡೆಸುವಂತೆ ಕೋರಿದ್ದರು. ಈ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಸಿ, ವಿವರವಾದ ವರದಿ ಸಲ್ಲಿಸುವಂತೆ ಸಿಎಂ ಸೂಚಿಸಿದ್ದಾರೆ.
ಬಿಬಿಎಂಪಿಯಿಂದ ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಎಂದು ಗುರುತಿನ ಚೀಟಿ ಹಾಕಿಕೊಂಡು ಈ ಅಕ್ರಮ ಎಸೆಯಲಾಗಿದೆ. ಈ ಅಕ್ರಮದ ಹಿಂದೆ ಸಚಿವರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು