4:29 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮತದಾನದ ಜಾಗೃತಿಗೆ ದೆಹಲಿಯಲ್ಲಿ 3 ತಾಸು ರಾಷ್ಟ್ರಧ್ವಜ ಹಿಡಿದು ಕಂಪ್ಲಿಯ ಮೋಹನ್ ಕುಮಾರ್ ಓಟ!

17/09/2022, 19:31

ಹೊಸದಿಲ್ಲಿ(reporterkarnataka.com): ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ಹೈ ಕೋರ್ಟಿನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮತದಾನ ಜಾಗೃತಿಗಾಗಿ ಹೊಸದಿಲ್ಲಿಯಲ್ಲಿ 3 ಗಂಟೆ ತಡೆರಹಿತ ಮ್ಯಾರಥಾನ್ ಓಟ ನಡೆಸುವ ಮೂಲಕ ಜಾಗೃತಿ ನಡೆಸಿದರು!


ಜಾಗೃತಿ ಓಟಕ್ಕೆ ಚಾಲನೆಯನ್ನ ಭಾರತ ಸರ್ಕಾರದ ಸುಪ್ರೀಂ ಕೋರ್ಟ್ ನ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾರವರಾದ ಕೆ.ಎಂ.ನಟರಾಜ್  ಅವರು ರಾಷ್ಟ್ರಧ್ವಜ ನೀಡುವ ಮೂಲಕ ಓಟಕ್ಕೆ ಚಾಲನೆ ನೀಡಿದರು. ನಂತರ ಬಲಗೈನಲ್ಲಿ ರಾಷ್ಟ್ರಧ್ವಜ,ಎಡಗೈನಲ್ಲಿ ಕರ್ನಾಟಕ ಧ್ವಜವನ್ನ ಹಿಡಿದು ಕರ್ನಾಟಕ ಭವನದಿಂದ ಓಟ ಪ್ರಾರಂಭಿಸಿದ ಮೋಹನ್ ಕುಮಾರ್ ದಾನಪ್ಪ ಇಂದಿರಾ ಗಾಂಧಿ ಸ್ಮಾರಕ, ರಾಯಭಾರಿ ಕಚೇರಿ ಅಕ್ಬರ್ ರಸ್ತೆ, ಇಂಡಿಯಾ ಗೇಟ್, ಜನಪಥ್ ರಸ್ತೆ, ಸುಪ್ರೀಂ ಕೋರ್ಟ್, ರಾಜ್ ಘಾಟ್, ರಾಷ್ಟ್ರಪತಿ ಭವನ್ ಮೂಲಕ ಕೆಂಪುಕೋಟೆಗೆ ತಲುಪಿದರು, 

ನಂತರ ಮಾತನಾಡಿದ ಮೋಹನ್ ಕುಮಾರ್ ರವರು ಮತದಾನ ನಮ್ಮ ಸಾಂವಿಧಾನಿಕ ಹಕ್ಕು, ಮತದಾನ ಮಾಡುವುದು ಸಹ ನಮ್ಮ ಆದ್ಯ ಕರ್ತವ್ಯ, ಮತದಾನ ಮಾಡಬೇಕಾದ ನಾಗರೀಕ ಪ್ರಭುಗಳು ಸಾಮಾಜಿಕ ಜಾಲತಾಣಗಳಲ್ಲಿ ನಿರತರಾಗಿರುವುದು ಮತ್ತು ಜವಾಬ್ದಾರಿಗಳ ಬಗ್ಗೆ ಉದಾಸೀನ ತೋರುತ್ತಿರುವುದರಿಂದ ಚುನಾವಣೆಗಳ ಮತದಾನದ ಶೇಕಡಾ ನೂರರಷ್ಟು ತಲುಪಲು ಅಸಾಧ್ಯವಾಗಿದೆ, ಮುಂಬರುವ ವಿಧಾನ ಸಭಾ, ಲೋಕಸಭಾ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು, 

ಕರ್ನಾಟಕದಿಂದ 2600 ಕಿ ಮೀ ದೂರದಲ್ಲಿರುವ ದೆಹಲಿಗೆ ಆಗಮಿಸಿ ವಿನೂತನ ಮ್ಯಾರಥಾನ್ ಕೈಗೊಂಡಿರುವುದು ಕರ್ನಾಟಕದಿಂದ ಪ್ರಥಮ ಪ್ರಯತ್ನವೆಂದರು,

 ಈ ಜಾಗೃತಿ ಮ್ಯಾರಥಾನ್ ನ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಕೆ.ಎಂ.ನಟರಾಜ್, ಎಂ ಎಸ್ ಐ ಎಲ್ ನ ನಿರ್ದೇಶಕ ಡಾ.ಎ.ಎಂ ಚಂದ್ರಪ್ಪ ನವರಿಗೆ ಸಲ್ಲಿಸಿದರು!

ಈ ಜಾಗೃತಿ ಓಟಕ್ಕೆ ರಾಜ್ಯದ ಸಚಿವರು, ಶಾಸಕರು, ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಹೈ ಕೋರ್ಟಿನ ಎಎಜಿ, ಎಎಸ್ಜಿಗಳು ಮೆಚ್ಚುಗೆ ವ್ಯಕ್ತ ಪಡಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು