8:23 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮತದಾನದ ಜಾಗೃತಿಗೆ ದೆಹಲಿಯಲ್ಲಿ 3 ತಾಸು ರಾಷ್ಟ್ರಧ್ವಜ ಹಿಡಿದು ಕಂಪ್ಲಿಯ ಮೋಹನ್ ಕುಮಾರ್ ಓಟ!

17/09/2022, 19:31

ಹೊಸದಿಲ್ಲಿ(reporterkarnataka.com): ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ಹೈ ಕೋರ್ಟಿನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮತದಾನ ಜಾಗೃತಿಗಾಗಿ ಹೊಸದಿಲ್ಲಿಯಲ್ಲಿ 3 ಗಂಟೆ ತಡೆರಹಿತ ಮ್ಯಾರಥಾನ್ ಓಟ ನಡೆಸುವ ಮೂಲಕ ಜಾಗೃತಿ ನಡೆಸಿದರು!


ಜಾಗೃತಿ ಓಟಕ್ಕೆ ಚಾಲನೆಯನ್ನ ಭಾರತ ಸರ್ಕಾರದ ಸುಪ್ರೀಂ ಕೋರ್ಟ್ ನ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾರವರಾದ ಕೆ.ಎಂ.ನಟರಾಜ್  ಅವರು ರಾಷ್ಟ್ರಧ್ವಜ ನೀಡುವ ಮೂಲಕ ಓಟಕ್ಕೆ ಚಾಲನೆ ನೀಡಿದರು. ನಂತರ ಬಲಗೈನಲ್ಲಿ ರಾಷ್ಟ್ರಧ್ವಜ,ಎಡಗೈನಲ್ಲಿ ಕರ್ನಾಟಕ ಧ್ವಜವನ್ನ ಹಿಡಿದು ಕರ್ನಾಟಕ ಭವನದಿಂದ ಓಟ ಪ್ರಾರಂಭಿಸಿದ ಮೋಹನ್ ಕುಮಾರ್ ದಾನಪ್ಪ ಇಂದಿರಾ ಗಾಂಧಿ ಸ್ಮಾರಕ, ರಾಯಭಾರಿ ಕಚೇರಿ ಅಕ್ಬರ್ ರಸ್ತೆ, ಇಂಡಿಯಾ ಗೇಟ್, ಜನಪಥ್ ರಸ್ತೆ, ಸುಪ್ರೀಂ ಕೋರ್ಟ್, ರಾಜ್ ಘಾಟ್, ರಾಷ್ಟ್ರಪತಿ ಭವನ್ ಮೂಲಕ ಕೆಂಪುಕೋಟೆಗೆ ತಲುಪಿದರು, 

ನಂತರ ಮಾತನಾಡಿದ ಮೋಹನ್ ಕುಮಾರ್ ರವರು ಮತದಾನ ನಮ್ಮ ಸಾಂವಿಧಾನಿಕ ಹಕ್ಕು, ಮತದಾನ ಮಾಡುವುದು ಸಹ ನಮ್ಮ ಆದ್ಯ ಕರ್ತವ್ಯ, ಮತದಾನ ಮಾಡಬೇಕಾದ ನಾಗರೀಕ ಪ್ರಭುಗಳು ಸಾಮಾಜಿಕ ಜಾಲತಾಣಗಳಲ್ಲಿ ನಿರತರಾಗಿರುವುದು ಮತ್ತು ಜವಾಬ್ದಾರಿಗಳ ಬಗ್ಗೆ ಉದಾಸೀನ ತೋರುತ್ತಿರುವುದರಿಂದ ಚುನಾವಣೆಗಳ ಮತದಾನದ ಶೇಕಡಾ ನೂರರಷ್ಟು ತಲುಪಲು ಅಸಾಧ್ಯವಾಗಿದೆ, ಮುಂಬರುವ ವಿಧಾನ ಸಭಾ, ಲೋಕಸಭಾ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು, 

ಕರ್ನಾಟಕದಿಂದ 2600 ಕಿ ಮೀ ದೂರದಲ್ಲಿರುವ ದೆಹಲಿಗೆ ಆಗಮಿಸಿ ವಿನೂತನ ಮ್ಯಾರಥಾನ್ ಕೈಗೊಂಡಿರುವುದು ಕರ್ನಾಟಕದಿಂದ ಪ್ರಥಮ ಪ್ರಯತ್ನವೆಂದರು,

 ಈ ಜಾಗೃತಿ ಮ್ಯಾರಥಾನ್ ನ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಕೆ.ಎಂ.ನಟರಾಜ್, ಎಂ ಎಸ್ ಐ ಎಲ್ ನ ನಿರ್ದೇಶಕ ಡಾ.ಎ.ಎಂ ಚಂದ್ರಪ್ಪ ನವರಿಗೆ ಸಲ್ಲಿಸಿದರು!

ಈ ಜಾಗೃತಿ ಓಟಕ್ಕೆ ರಾಜ್ಯದ ಸಚಿವರು, ಶಾಸಕರು, ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಹೈ ಕೋರ್ಟಿನ ಎಎಜಿ, ಎಎಸ್ಜಿಗಳು ಮೆಚ್ಚುಗೆ ವ್ಯಕ್ತ ಪಡಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು