1:14 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮತದಾನದ ಜಾಗೃತಿಗೆ ದೆಹಲಿಯಲ್ಲಿ 3 ತಾಸು ರಾಷ್ಟ್ರಧ್ವಜ ಹಿಡಿದು ಕಂಪ್ಲಿಯ ಮೋಹನ್ ಕುಮಾರ್ ಓಟ!

17/09/2022, 19:31

ಹೊಸದಿಲ್ಲಿ(reporterkarnataka.com): ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ಹೈ ಕೋರ್ಟಿನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮತದಾನ ಜಾಗೃತಿಗಾಗಿ ಹೊಸದಿಲ್ಲಿಯಲ್ಲಿ 3 ಗಂಟೆ ತಡೆರಹಿತ ಮ್ಯಾರಥಾನ್ ಓಟ ನಡೆಸುವ ಮೂಲಕ ಜಾಗೃತಿ ನಡೆಸಿದರು!


ಜಾಗೃತಿ ಓಟಕ್ಕೆ ಚಾಲನೆಯನ್ನ ಭಾರತ ಸರ್ಕಾರದ ಸುಪ್ರೀಂ ಕೋರ್ಟ್ ನ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾರವರಾದ ಕೆ.ಎಂ.ನಟರಾಜ್  ಅವರು ರಾಷ್ಟ್ರಧ್ವಜ ನೀಡುವ ಮೂಲಕ ಓಟಕ್ಕೆ ಚಾಲನೆ ನೀಡಿದರು. ನಂತರ ಬಲಗೈನಲ್ಲಿ ರಾಷ್ಟ್ರಧ್ವಜ,ಎಡಗೈನಲ್ಲಿ ಕರ್ನಾಟಕ ಧ್ವಜವನ್ನ ಹಿಡಿದು ಕರ್ನಾಟಕ ಭವನದಿಂದ ಓಟ ಪ್ರಾರಂಭಿಸಿದ ಮೋಹನ್ ಕುಮಾರ್ ದಾನಪ್ಪ ಇಂದಿರಾ ಗಾಂಧಿ ಸ್ಮಾರಕ, ರಾಯಭಾರಿ ಕಚೇರಿ ಅಕ್ಬರ್ ರಸ್ತೆ, ಇಂಡಿಯಾ ಗೇಟ್, ಜನಪಥ್ ರಸ್ತೆ, ಸುಪ್ರೀಂ ಕೋರ್ಟ್, ರಾಜ್ ಘಾಟ್, ರಾಷ್ಟ್ರಪತಿ ಭವನ್ ಮೂಲಕ ಕೆಂಪುಕೋಟೆಗೆ ತಲುಪಿದರು, 

ನಂತರ ಮಾತನಾಡಿದ ಮೋಹನ್ ಕುಮಾರ್ ರವರು ಮತದಾನ ನಮ್ಮ ಸಾಂವಿಧಾನಿಕ ಹಕ್ಕು, ಮತದಾನ ಮಾಡುವುದು ಸಹ ನಮ್ಮ ಆದ್ಯ ಕರ್ತವ್ಯ, ಮತದಾನ ಮಾಡಬೇಕಾದ ನಾಗರೀಕ ಪ್ರಭುಗಳು ಸಾಮಾಜಿಕ ಜಾಲತಾಣಗಳಲ್ಲಿ ನಿರತರಾಗಿರುವುದು ಮತ್ತು ಜವಾಬ್ದಾರಿಗಳ ಬಗ್ಗೆ ಉದಾಸೀನ ತೋರುತ್ತಿರುವುದರಿಂದ ಚುನಾವಣೆಗಳ ಮತದಾನದ ಶೇಕಡಾ ನೂರರಷ್ಟು ತಲುಪಲು ಅಸಾಧ್ಯವಾಗಿದೆ, ಮುಂಬರುವ ವಿಧಾನ ಸಭಾ, ಲೋಕಸಭಾ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು, 

ಕರ್ನಾಟಕದಿಂದ 2600 ಕಿ ಮೀ ದೂರದಲ್ಲಿರುವ ದೆಹಲಿಗೆ ಆಗಮಿಸಿ ವಿನೂತನ ಮ್ಯಾರಥಾನ್ ಕೈಗೊಂಡಿರುವುದು ಕರ್ನಾಟಕದಿಂದ ಪ್ರಥಮ ಪ್ರಯತ್ನವೆಂದರು,

 ಈ ಜಾಗೃತಿ ಮ್ಯಾರಥಾನ್ ನ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಕೆ.ಎಂ.ನಟರಾಜ್, ಎಂ ಎಸ್ ಐ ಎಲ್ ನ ನಿರ್ದೇಶಕ ಡಾ.ಎ.ಎಂ ಚಂದ್ರಪ್ಪ ನವರಿಗೆ ಸಲ್ಲಿಸಿದರು!

ಈ ಜಾಗೃತಿ ಓಟಕ್ಕೆ ರಾಜ್ಯದ ಸಚಿವರು, ಶಾಸಕರು, ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಹೈ ಕೋರ್ಟಿನ ಎಎಜಿ, ಎಎಸ್ಜಿಗಳು ಮೆಚ್ಚುಗೆ ವ್ಯಕ್ತ ಪಡಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು