3:08 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಠಗಳ ಅನುದಾನದಲ್ಲಿ ಪರ್ಸೆಂಟೇಜ್ ಆರೋಪ: ಮಠಾಧೀಶರು ದಾಖಲೆ ಕೊಟ್ಟರೆ ತನಿಖ: ಸಿಎಂ ಬೊಮ್ಮಾಯಿ

18/04/2022, 23:43

ಬೆಂಗಳೂರು(reporterkarnataka.com): ಬಾಳೆಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳ 30 ಪರ್ಸೆಂಟ್‌ ಕಮಿಷನ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಮಠಾಧೀಶರು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ನೀಡಲಿ ತನಿಖೆ ಮಾಡುತ್ತೇವೆ’ ಎಂದರು.

ದಿಂಗಾಲೇಶ್ವರ ಸ್ವಾಮೀಜಿಗಳ ಮಾತಿಗೆ ಬೆಲೆ ಕೊಡುತ್ತೇವೆ.ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ನೀಡಲಿ. ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ಕೊಡಲಿ. ದಾಖಲೆ ನೀಡದರೆ ಈ ಕುರಿತು ಸಂಪೂರ್ಣ ತನಿಖೆ ಮಾಡ್ತೇವೆ. ಅದರ ಆಳಕ್ಕೆ ಹೋಗ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದರು.

ಮಠಗಳಿಗೆ ಬರುವ ಅನುದಾನದಲ್ಲೂ 30% ಕಮಿಷನ್‌ ಕೊಟ್ಟರಷ್ಟೇ ಅನುದಾನ ಬಿಡುಗಡೆ ಮಾಡುತ್ತಾರೆ. ಇದು ಬಿಜೆಪಿ ಸರ್ಕಾರ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲೂ ಇದೇ ಪರಿಸ್ಥಿತಿ ಇದೆ. ಕಮಿಷನ್‌ ಕಟ್‌ ಮಾಡಿಯೇ ಕೊಡುತ್ತಾರೆ. ಮಠದ ಅನುದಾನದಲ್ಲೂ ಕಮಿಷನ್‌ ಕೇಳುತ್ತಾರೆ. ಅನುದಾನದಲ್ಲೂ ಪರ್ಸೆಂಟೇಜ್‌ ಕೊಡಬೇಕು. ಎನ್‌ ಓಸಿಗೂ ಕಮಿಷನ್‌ ಕೊಡಬೇಕು. ಭೂಮಿ ಪೂಜೆಗೂ ಕಮಿಷನ್‌ ಕೊಡಬೇಕು . ಇದರ ಜತೆಗೆ ಯಾಕೆ ಹಣ ಕೊಟ್ಟಿಲ್ಲ ಎಂದು ದೌರ್ಜನ್ಯ ಮಾಡುತ್ತಾರೆಂದು ಗಂಭೀರವಾಗಿ ಬಾಲೇ ಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳು ಅರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು