5:14 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಠಗಳ ಅನುದಾನದಲ್ಲಿ ಪರ್ಸೆಂಟೇಜ್ ಆರೋಪ: ಮಠಾಧೀಶರು ದಾಖಲೆ ಕೊಟ್ಟರೆ ತನಿಖ: ಸಿಎಂ ಬೊಮ್ಮಾಯಿ

18/04/2022, 23:43

ಬೆಂಗಳೂರು(reporterkarnataka.com): ಬಾಳೆಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳ 30 ಪರ್ಸೆಂಟ್‌ ಕಮಿಷನ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಮಠಾಧೀಶರು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ನೀಡಲಿ ತನಿಖೆ ಮಾಡುತ್ತೇವೆ’ ಎಂದರು.

ದಿಂಗಾಲೇಶ್ವರ ಸ್ವಾಮೀಜಿಗಳ ಮಾತಿಗೆ ಬೆಲೆ ಕೊಡುತ್ತೇವೆ.ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ನೀಡಲಿ. ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್‌ ಕೊಟ್ಟಿದ್ದಾರೆ ದಾಖಲೆ ಕೊಡಲಿ. ದಾಖಲೆ ನೀಡದರೆ ಈ ಕುರಿತು ಸಂಪೂರ್ಣ ತನಿಖೆ ಮಾಡ್ತೇವೆ. ಅದರ ಆಳಕ್ಕೆ ಹೋಗ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದರು.

ಮಠಗಳಿಗೆ ಬರುವ ಅನುದಾನದಲ್ಲೂ 30% ಕಮಿಷನ್‌ ಕೊಟ್ಟರಷ್ಟೇ ಅನುದಾನ ಬಿಡುಗಡೆ ಮಾಡುತ್ತಾರೆ. ಇದು ಬಿಜೆಪಿ ಸರ್ಕಾರ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲೂ ಇದೇ ಪರಿಸ್ಥಿತಿ ಇದೆ. ಕಮಿಷನ್‌ ಕಟ್‌ ಮಾಡಿಯೇ ಕೊಡುತ್ತಾರೆ. ಮಠದ ಅನುದಾನದಲ್ಲೂ ಕಮಿಷನ್‌ ಕೇಳುತ್ತಾರೆ. ಅನುದಾನದಲ್ಲೂ ಪರ್ಸೆಂಟೇಜ್‌ ಕೊಡಬೇಕು. ಎನ್‌ ಓಸಿಗೂ ಕಮಿಷನ್‌ ಕೊಡಬೇಕು. ಭೂಮಿ ಪೂಜೆಗೂ ಕಮಿಷನ್‌ ಕೊಡಬೇಕು . ಇದರ ಜತೆಗೆ ಯಾಕೆ ಹಣ ಕೊಟ್ಟಿಲ್ಲ ಎಂದು ದೌರ್ಜನ್ಯ ಮಾಡುತ್ತಾರೆಂದು ಗಂಭೀರವಾಗಿ ಬಾಲೇ ಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳು ಅರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು