ಇತ್ತೀಚಿನ ಸುದ್ದಿ
ಮತಾಂತರ ನಿಷೇಧ ಕಾಯ್ದೆ; ರಾಜ್ಯದಲ್ಲಿ ಮೊದಲ ಪ್ರಕರಣ ಯಶವಂತಪುರ ಠಾಣೆಯಲ್ಲಿ ದಾಖಲು; ಯುವಕನ ಬಂಧನ
14/10/2022, 21:25
ಬೆಂಗಳೂರು(reporterkarnataka.com); ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಮೊದಲ ಪ್ರಕರಣ ನಗರದ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಸೈಯದ್ ಮೊಯಿನ್ (24) ವಿರುದ್ಧ ಮತಾಂತರ ನಿಷೇಧ ಕಾಯ್ದೆಯಲ್ಲಿ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಬೇಕಾದರೆ ಮತಾಂತರ ಆಗಬೇಕೆಂದು ಯುವತಿಯನ್ನು ಬಲವಂತವಾಗಿ ಮಾಡಿದ್ದನೆಂದು ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಯುವತಿ ಕುಟುಂಬ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ವಾಸ ಮಾಡುತ್ತಿದ್ದರು.ಯುವತಿಯು ಚಿಕನ್ ಸ್ಟಾಲ್ ಇಟ್ಟುಕೊಂಡಿದ್ದ ಮೊಯಿನ್ ನ ಪ್ರೀತಿಸುತ್ತಿದ್ದಳು. ಯುವಕ ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ.ಯುವಕನ ಒತ್ತಡದಿಂದ ಯುವತಿ ಮತಾಂತರಗೊಂಡಿದ್ದಾಳೆ ಎಂದು ಆರೋಪಿಸಿ ದೂರು ನೀಡಲಾಗಿದೆ.ಇದೀಗ ಆರೋಪಿಯನ್ನು ಬಂಧಿಸಲಾಗಿದೆ.














