1:52 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಮತಾಂತರದ ಕಾಯ್ದೆಯಿಂದ ಯಾರು ಭಯ ಪಡಬೇಕಾಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

24/12/2021, 12:34

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬಿಜೆಪಿ ಸರ್ಕಾರ ವಿಪಕ್ಷಗಳ ವಿರೋಧ ನಡುವೆ ಮತಾಂತರ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಈ ಕಾಯ್ದೆಯಿಂದ ಯಾರು ಭಯಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು. 

ಅವರು ಅಥಣಿ ಪಟ್ಟಣದ ಪುರಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಂಡ ಸಮಯದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು. 

ಮತಾಂತರ ಕಾಯ್ದೆ ಜಾರಿಯಿಂದ ಭಯ ಬೇಡ, ಒಂದೇ ಸಮಾಜಕ್ಕೆ ಸೀಮಿತವಾಗಿಲ್ಲ, ಅಲ್ಪಸಂಖ್ಯಾತರನ್ನು ಗುರಿ ಮಾಡಿ ಈ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಆದರೂ ಎಲ್ಲರಿಗೂ ಈ ಮತಾಂತರ ಕಾಯ್ದೆ ಅನ್ವಯ ಆಗುತ್ತದೆ ಎಂದು ತಿಳಿಸಿದರು. 

ಮಹಾರಾಷ್ಟ್ರ ರಾಜ್ಯದಲ್ಲಿ ಕನ್ನಡ ಬಾವುಟ ಅವಮಾನ ಮಾಡುತ್ತಿದ್ದಾರೆ, ಅವರ ರಾಜ್ಯದಲ್ಲಿ ದುಷ್ಕೃತ್ಯ ಮಾಡುವುದರಿಂದ ನಾವು ಏನು ಮಾಡುದಕ್ಕೆ ಆಗುವುದಿಲ್ಲ. ನಮ್ಮ ರಾಜ್ಯದಲ್ಲಿ ಆಗಿರುವ ಘಟನೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.  ನಾವು ಇದರಬಗ್ಗೆ ಹೆಚ್ಚಿಗೆ ಮಾತನಾಡು ಅವಶ್ಯಕತೆ ಇಲ್ಲಾ, ಕನ್ನಡ ಬಾವುಟಕ್ಕೆ ಅವಮಾನ ಮಾಡಿರುವುದಕ್ಕೆ ಸರ್ಕಾರ ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ತಿಳಿಸಿದರು. ನಾವು ಕನ್ನಡ ಪರವಾಗಿ ಇದ್ದೆವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು