12:11 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮತಾಂತರ ನಿಷೇಧ ಕಾಯಿದೆ ಜಾರಿಗೆ ಶೀಘ್ರದಲ್ಲೇ  ಸುಗ್ರೀವಾಜ್ಞೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

09/04/2022, 13:12

ಮೈಸೂರು(reporterkarnataka.com): ಶೀಘ್ರದಲ್ಲೇ ಮತಾಂತರ ನಿಷೇಧ ಕಾಯಿದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಮತ್ತು ಸ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸಭೆಯನ್ನು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿ ವಿಧಾನ ಪರಿಷತ್‌ನಲ್ಲಿ ಅನುಮೋದನೆ ಪಡೆಯಲಾಯಿತು. ಆದರೆ, ಮತಾಂತರ ನಿಷೇಧಕ್ಕೆ ಅವಕಾಶ ಸಿಗದ ಕಾರಣ ಮುಂದಿನ ದಿನಗಳಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಮುಂದೆ ಬಹುಮತದ ಆಧಾರದ ಮೇಲೆ ಮಸೂದೆಗೆ ಅನುಮೋದನೆ ಪಡೆಯಲಾಗುವುದು ಎಂದು ಹೇಳಿದರು.

ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ನೀಡಿದ್ದರೂ ಪಾಲನೆ ಮಾಡಬೇಕಾದ ಕಾಂಗ್ರೆಸ್ ನಾಯಕರು ಭಿನ್ನ ನಡೆ ಅನುಸರಿಸುತ್ತಿದ್ದು, ದೇಶ ಒಂದು ಕಡೆಯಾದರೆ, ಕಾಂಗ್ರೆಸ್ ಮತ್ತೊಂದು ದಿಕ್ಕಿನತ್ತ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ನ್ಯಾಯಾಲಯವು ಕೊಟ್ಟ ತೀರ್ಪು ಗೌರವಿಸಬೇಕು. ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿ. ಆದರೆ, ನ್ಯಾಯಾಲಯದ ತೀರ್ಪನ್ನು ಬದಿಗೊತ್ತಿ ನಾವು ಹೇಳಿದ್ದನ್ನು ಮಾಡಬೇಕು ಎನ್ನುತ್ತಾರೆ. ದೇಶ,ಪ್ರಪಂಚ ಒಂದು ಕಡೆಯ ಹಾದಿಯಲ್ಲಿ ಹೋದರೆ, ಕಾಂಗ್ರೆಸ್ ನಾಯಕರು ಅದಕ್ಕೆ ವ್ಯತಿರಿಕ್ತವಾಗಿ ಸಾಗುತ್ತಿದ್ದಾರೆ ಎಂದು ಕಿಡಿಕಾರಿದರು. ಮುಂದಿನ ದಿನಗಳಲ್ಲಿ ನಮ್ಮ ವೈಚಾರಿಕ ನಿಲುವುಗಳನ್ನು ಜನರ ಮುಂದೆ ಹೇಳಿಕೊಂಡು ಸಾಗಬೇಕು. ರಾಜಕೀಯ ಹಿನ್ನೆಡೆ ಅನುಭವಿಸ ಬದಲಿಗೆ ಜನಪರ ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯಲು ಯತ್ನಿಸಬೇಕು. ಮಂತ್ರಿ, ಸಿಎಂ ಸೇರಿದಂತೆ ಪ್ರತಿಯೊಬ್ಬರೂ ವೈಚಾರಿಕ ವಿಚಾರಗಳನ್ನು ಗಟ್ಟಿಗೊಳಿಸಬೇಕು. ನಮ್ಮ ಆಚಾರ ವಿಚಾರಗಳನ್ನು ಮನವರಿಕೆ ಮಾಡಿಕೊಡಬೇಕು. ಸಾಲ ಮನ್ನಾ ಮಾಡಿ ಎನ್ನುವ ಕೂಗಿನ ಬದಲಿಗೆ ಪಿಎಂ ಸಮ್ಮಾನ್ ಕಿಸಾನ್ ಯೋಜನೆಯಿಂದ ವರ್ಷಕ್ಕೆ ಹತ್ತು ಸಾವಿರ ರೂ.ಗಳು ರೈತರ ಮನೆಬಾಗಿಲಿಗೆ ತಲುಪುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಬದಲಾವಣೆ, ಮೀನುಗಾರಿಕೆ ಯೋಜನೆ, ಹಿಂದುಳಿದ ವರ್ಗದ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ಅಧಿಕಾರಿಗಳ ಮಾನಸಿಕವಾಗಿ ಬದಲಾವಣೆ ಆಗಬೇಕು. ಕಚೇರಿಗೆ ಸೀಮಿತವಾಗದೆ ಕ್ಷೇತ್ರದಲ್ಲಿ ಇದ್ದು ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡಬೇಕು. ಪ್ರತಿ?ಂAದು ವಿಚಾರಗಳ ಬಗ್ಗೆ ಕಣ್ಗಾವಲು ಇಡಬೇಕು ಎಂದು ಕಿವಿಮಾತು ಹೇಳಿದರು.

ದಿನದಿಂದ ದಿನಕ್ಕೆ ಕಾರ್ಯಕರ್ತರ ಸಂಖ್ಯೆ ಜಾಸ್ತಿಯಾಗಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಸಮರ್ಥ ಭಾರತ ಸ್ವಾಭಿಮಾನಿ ಭಾರತ ನಿರ್ಮಾಣವಾಗಿದೆ. ಪ್ರಧಾನಮಂತ್ರಿ ಕಾರ್ಯಶೈಲಿಯಿಂದಾಗಿ ಕೋವಿಡ್ ಸವಾಲಿನ ನಡುವೆ ದೇಶ ಅಭಿವೃದ್ಧಿಯಾಗಿದೆ. ನಮ್ಮ ವಿರುದ್ಧ ಮಾತನಾಡುವವರು ದಿಗ್ಬçಮೆ ಹೊಂದುವ ರೀತಿ ಕೆಲಸ ಮಾಡಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಭಾರತಕ್ಕೆ ತರಲಾಗಿದೆ. ಪ್ರತಿಕ್ಷಣ ಜೀವ ಇರುತ್ತದೆ ಅನ್ನುವ ನಂಬಿಕೆ ಇರಲಿಲ್ಲ.ಆದರೆ ಭಾರತೀಯ ರಾದ ನಾವು ಸುರಕ್ಷಿತವಾಗಿ ತಲುಪಲಿದ್ದೇವೆ ಎನ್ನುವ ಆಶಾಭಾವನೆ ಇತ್ತು. ಬದಲಾದ ಭಾರತದ ಶಕ್ತಿ ತೋರಿಸುತ್ತದೆ. ಸಾಮಾನ್ಯ ಕಾರ್ಯಕರ್ತನಿಗೆ ಇದಕ್ಕಿಂತ ಹೆಮ್ಮೆ ವಿಚಾರ ಬೇರೆ ಏನಿಲ್ಲ ಎಂದರು. ಹಲವಾರು ಸಮಸ್ಯೆಗಳಿಗೆ ಪರಿಹಾರ. ಇಡೀ ದೇಶದಲ್ಲಿ ಭಾರತ ಒಂದಾಗುತ್ತಿದೆ. ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಕಡಿಮೆಯಾಗಿದೆ. 360 ಕಲಂ ರದ್ದು ಮಾಡಿದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುತ್ತಿದ್ದಾರೆ. ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಸಂದಿಗ್ಧ ಪರಿಸ್ಥಿತಿಯನ್ನು ನಿವಾರಣೆ ಮಾಡಿದ ಮೋದಿಯ ಸಂಕಲ್ಪದಿಂದಾಗಿ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಈ ವೇಳೆ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎ.ಹೇಮಂತ್ ಕುಮಾರ್ ಗೌಡ, ನಗರಪಾಲಿಕೆ ನಾಮ ನಿರ್ದೇಶಿತರಾದ ಆಶಾ ನಾಗಭೂಷಣ್ ಸಿಂಗ್, ಕೆ.ಜೆ.ರಮೇಶ್, ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಜೋಗಿ ಮಂಜು,ಗ್ರಾಮಾAತರ ಜಿಲ್ಲಾ ಅಧ್ಯಕ್ಷ ಪರಶುರಾಮಪ್ಪ, ಎಸ್. ಟಿ. ಮೋರ್ಚಾ ಅಧ್ಯಕ್ಷ ಲಕ್ಷತ್ಮಣ್ ,ಪ್ರಧಾನ ಕಾರ್ಯದರ್ಶಿ ಮಣಿರತ್ನಂ ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು