12:54 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಡಿಜಿಟಲ್ ವಾಚ್ ಸಹಿತ ಇ-ಗ್ಯಾಜೆಟ್‍ ಕೊಂಡೊಯ್ಯುವುದು ನಿಷೇಧ

09/05/2023, 10:32

ಮಂಗಳೂರು(reporterkarnataka.com): ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು, ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‍ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.
ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‍ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರಾತಿನಿಧಿ ಕಾಯಿದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆಯ ಕಾಯಿದನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು