2:03 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಮತ ಎಣಿಕೆ ಕೇಂದ್ರದ ಸಿದ್ದತೆ: ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ

31/05/2024, 20:07

ಮಂಗಳೂರು(reporterkarnataka.com): ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು,ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದರು.
ಜೂನ್ 4ರಂದು ಬೆಳಗ್ಗೆ ಸ್ಟ್ರಾಂಗ್ ರೂಮ್ ತೆರೆಯುವು ದರಿಂದ ಹಿಡಿದು ಸಂಜೆ ಇವಿಎಂ ಮಷಿನ್‍ಗಳು ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲಾ ಹಂತಗಳನ್ನು ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ಸಭೆಯಲ್ಲಿ ವಿವರಿಸಿದರು.
ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಭಾರತ ಚುನಾವಣಾ ಆಯೋಗ ನೀಡಿದ್ದು, ಪ್ರತಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟ್ , ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕೆಂದು ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಹೇಳಿದರು.
ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ನಿಗದಿತ ಸ್ಥಳ ಗುರುತಿಸಿ ಸಿದ್ದತೆ ಮಾಡಲಾಗಿದೆ. ಅಂದು ಮತ ಎಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ. ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ ಮಾಡುವಂತಿಲ್ಲ ಎಂದು ಅವರು ಹೇಳಿದರು.
ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ನುಡಿದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಂತೋಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು