8:23 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮತದಾರರ ಜತೆಯೇ ಎಗರಾಡಿದ ‘ನೀರು ಕೊಡದ’ ಕಾರ್ಪೋರೇಟರ್: ಕಠಿಣ ಕ್ರಮಕ್ಕೆ ಮೇಯರ್, ಕಮಿಷನರ್ ಗೆ ಸ್ಥಳೀಯರ ಮನವಿ

19/07/2023, 22:45

ಮಂಗಳೂರು(reporterkarnataka.com): ನಾಗರಿಕರಿಗೆ ಕುಡಿಯುವ ನೀರು ಒದಗಿಸಲಾಗದ ಬಿಜೆಪಿ ಕಾರ್ಪೊರೇಟರ್ ಜಯಲಕ್ಷ್ಮೀ ಅವರು ತನ್ನ ವಾರ್ಡ್ ನ ನಾಗರಿಕರ ಮೇಲೆಯೇ ಎಗರಾಡಿ ಅಸಭ್ಯವಾಗಿ ವರ್ತಿಸಿದ ಕುರಿತು ಸ್ಥಳೀಯ ನಾಗರಿಕರು ಡಿವೈಎಫ್ ಐ ನೇತೃತ್ವದಲ್ಲಿ ಮೇಯರ್ ಹಾಗೂ ಪಾಲಿಕೆಯ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ಉರ್ವಸ್ಟೋರ್ ಸಮೀಪದ ಸುಂಕದಕಟ್ಟೆ ವಸತಿ ಕಾಲೊನಿಯಲ್ಲಿ ಕಳೆದ 12 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಅದನ್ನು ಪರಿಹರಿಸಿ ಜನರ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರು ಒದಗಿಸದೆ ಬೇಜವಾಬ್ದಾರಿ ತೋರಿಸಿದ ಕಾರ್ಪೋರೇಟರ್ ಅವರು ಸ್ಥಳೀಯರ ಜತೆ ಅಸಂಬದ್ಧವಾಗಿ ಮಾತನಾಡಿದ್ದರು. ಸ್ಥಳೀಯ ರನ್ನು ಭೇಟಿಯಾಗಿ ಎದುರು ನಿಂತು ಮಾತನಾಡಬೇಕಾಗಿದ್ದ ಕಾರ್ಪೊರೇಟರ್ ಜಯಲಕ್ಷ್ಮೀ ಅವರು ಅತ್ತ ಇತ್ತ ಓಡಾಡುತ್ತಾ, ಜನರಿಗೆ ಅಸಂಬದ್ಧ ಉತ್ತರ ನೀಡುತ್ತಿದ್ದರು. ಇದರ ವೀಡಿಯೊವೊಂದು ನಿನ್ನೆಯೇ ವೈರಲ್ ಆಗಿತ್ತು.


ಈ ಕುರಿತು ನಿಯೋಗವೊಂದು ಮೇಯರ್ ಹಾಗೂ ಪಾಲಿಕೆ ಕಮಿಷನರ್ ಅವರನ್ನು ಭೇಟಿಯಾಗಿ ಕಾರ್ಪೋರೇಟರ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ನಿಯೋಗದಲ್ಲಿ ಸಿಪಿಎಂ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಪ್ರಶಾಂತ್ ಎಂ.ಬಿ. ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು