4:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಾತೃ ಶಕ್ತಿಯಿಂದ ಸ್ವಾಸ್ಥ್ಯ ಸಮೃದ್ಧಿ: ಅಮೃತ ಆರೋಗ್ಯ ಮೇಳದಲ್ಲಿ ಚಿತ್ತರಂಜನ್ ಬೋಳಾರ್

23/01/2024, 18:48

ಮಂಗಳೂರು(reporterkarnataka.com): ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಆಯೋಜಿಸಿದ “ಅಮೃತ ಆರೋಗ್ಯ ಮೇಳ” ವು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಜರುಗಿತು.
ಯೇನಪೋಯ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು ಆಸ್ಪತ್ರೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಈ ಶಿಬಿರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಗಳ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಉದ್ಘಾಟಿಸಿದರು. ಅವರು ಮಾತನಾಡಿ
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಆಶ್ರಮದ ಮಾನವೀಯ ಸೇವಾ ಉಪಕ್ರಮಗಳು, ಉಚಿತ ವೈದ್ಯಕೀಯ ಶಿಬಿರಗಳು ಕಳೆದ 25 ವರ್ಷಗಳಿಂದ ಹೆಚ್ಚಿನ ಪ್ರಚಾರ ಪಡೆಯದೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಆತ್ಮಶಕ್ತಿ ಹಾಗೂ ಬಿಲ್ಲವ ಸಂಘಗಳ ಹೆಚ್ಚಿನ ಶಿಬಿರಗಳಲ್ಲಿ ಮಠದ ವೈದ್ಯಕೀಯ ತಂಡ ಉಚಿತವಾಗಿ ತಪಾಸಣೆ ನಡೆಸಿ ಔಷಧಗಳನ್ನು ಕೂಡ ಉಚಿತವಾಗಿ ವಿತರಣೆ ಮಾಡಿಕೊಂಡು ಬಂದಿದ್ದಾರೆ. ಇಂತಹ ಉಚಿತ ಶಿಬಿರಗಳು ಜನರು ರೋಗ ಬರುವ ಸಾಕಷ್ಟು ಮುಂಚಿತವಾಗಿ ಕಂಡುಬರುವ ಪೂರ್ವ ಲಕ್ಷಣಗಳನ್ನು ಗುರುತಿಸಿ ರೋಗಬರದಂತೆ ತಡೆಯಲು ಅತ್ಯಂತ ಉಪಯುಕ್ತ ವಿಧಾನವಾಗಿದೆ. ಅಮ್ಮನವರ ಆಶೀರ್ವಾದವನ್ನು ನಡೆಯುವ ಈ ಶಿಬಿರದಲ್ಲಿ ಬಂದಂತ ಎಲ್ಲರಿಗೂ ಆರೋಗ್ಯ ಪೂರ್ಣ ಜೀವನವನ್ನು ನೀಡಿ ಹರಸಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು.


ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ಸುಚಿತ್ರಾ ರಾವ್ ಸ್ವಾಗತಿಸಿದರು. ಡಾ‌ ದೇವದಾಸ್ ಪುತ್ರನ್ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಯೇನಪೋಯ ದಂತ ವೈದ್ಯಕೀಯ ಆಸ್ಪತ್ರೆಯ ಡಾ.ಸುಪ್ರಿಯಾ ಎ., ಸೇವಾ ಸಮಿತಿಯ ಉಪಾದ್ಯಕ್ಷ ಸುರೇಶ್ ಅಮೀನ್, ದಿಲೀಪ್ ಕುಮಾರ್, ರಾಜನ್, ಆಯುಧ್ ನ ಡಾ.ತನುಷಾ ಶೆಟ್ಟಿ, ಪೂರ್ಣಿಮಾ, ರೂಪಾ, ಆತ್ಮಶಕ್ತಿ ಯ ಗೋಪಾಲ್, ಏನಪೋಯ ಆಸ್ಪತ್ರೆಯ ಭರತ್, ಸಮೀರ್ ನಮಿತ ಮೊದಲಾದವರು ಉಪಸ್ಥಿತರಿದ್ದರು. ಸಾರ್ವಜನಿಕರು ವಿವಿಧ ತಜ್ಞ ವೈದರಿಂದ ಉನ್ನತ ತಪಾಸಣೆ, ದಂತ ಚಿಕಿತ್ಸೆ ಮೊದಲಾದ ಸೌಲಭ್ಯಗಳ ಪ್ರಯೋಜನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು