7:48 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮತ್ತೆ ಚಿಣ್ಣರ ಕಲರವ: ಗುಲಾಬಿ ಕೊಟ್ಟು, ಸಿಹಿತಿಂಡಿ ನೀಡಿ ಶಾಲೆಗೆ ಶಿಕ್ಷಕರಿಂದ ಮಕ್ಕಳಿಗೆ ಸ್ವಾಗತ

07/09/2021, 15:30

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ವರ್ಷಗಟ್ಟಲೆ ಶಾಲೆಗೆ ಹಾಜರಾಗದೆ ಮನೆಯಲ್ಲೇ ಇದ್ದು ಕಾಲ ಕಳೆದಿದ್ದ ಮಕ್ಕಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸಡಗರ-ಸಂಭ್ರಮದಿಂದ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಹಾಜರಾದರು.

ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಸಮೀಪವಿರುವ ತೂಬಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ನಡೆಯಿತು. ಶಿಕ್ಷಕರು ಪೋಷಕರ ಒಪ್ಪಿಗೆಯೊಂದಿಗೆ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ನಂತರ ಸಿಹಿತಿಂಡಿ ಕೊಟ್ಟು ಮಕ್ಕಳು ಬಾಯಿ ಚಪ್ಪರಿಸುವಂತೆ ಮಾಡಿದರು.

ಮಕ್ಕಳಿಗೆ ಶಾಲೆಗೆ ಬರುವ ಮುನ್ನ  ಸ್ಯಾನಿಟೈಸರ್ ಮಾಡಿಸಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿತ್ತು. ಈ ವ್ಯವಸ್ಥೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಚನ್ನಬಸವ ಹಾಗೂ ಸಹ ಶಿಕ್ಷಕರಾದ ನವೀನ್ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು