4:27 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮತ್ತೆ ಕಾಂಗ್ರೆಸ್ ವೇದಿಕೆಯೇರಿದ ಹಿರಿಯ ಮುತ್ಸದ್ಧಿ: ‘ಪ್ರಜಾಧ್ವನಿ’ಯಲ್ಲಿ ಸಿದ್ದರಾಮಯ್ಯ- ಪೂಜಾರಿ ಸಮಾಗಮ!

23/01/2023, 11:20

ಮಂಗಳೂರು(reporterkarnataka.com): ದಶಕಗಳ ಬಳಿಕ ಕಾಂಗ್ರಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಂಡ ಎಲ್ಲರ ಕುತೂಹಲಕ್ಕೆ ಕಾರಣರಾದರು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟು ಟೀಕೆಕಾರರಾದ ಪೂಜಾರಿ ಅವರು ಭಾನುವಾರ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡರು. ವಯೋಸಹಜ ಸಮಸ್ಯೆಗಳಿದ್ದರೂ ಪೂಜಾರಿ ಅವರು ತಾಳ್ಮೆಯಿಂದ ಎಲ್ಲ ನಾಯಕರುಗಳ ಭಾಷಣವನ್ನು ಆಲಿಸಿದರು. ಕಾಂಗ್ರೆಸ್ ನ ಭೀಷ್ಮ ಎಂದೇ ಪರಿಗಣಿಸಲ್ಪಟ್ಡ ಪೂಜಾರಿ ಅವರ ಜತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸುರ್ಜೇವಾಲ, ಡಾ.ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಘಟಾನುಘಟಿಗಳು ಗ್ರೂಪ್ ಫೋಟೋ ತೆಗೆಸಿಕೊಂಡರು.

2013ರಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರ ಕಾರ್ಯ ವೈಖರಿಯನ್ನು ಪೂಜಾರಿ ಅವರು ಕಟು ಟೀಕೆ ಮಾಡುತ್ತಿದ್ದರು.

ಅಂದು ಹಂಪನಕಟ್ಟೆಯ ಬಾಡಿಗೆ ಕಟ್ಟಡದಲ್ಲಿದ್ದ ಕಾಂಗ್ರೆಸ್ ಕಚೇರಿಯಲ್ಲಿ ಪೂಜಾರಿ ಅವರು ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ನಂತರ ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರು ಪೂಜಾರಿ ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನಿರಾಕರಿಸಿದರು. ಆ ಮೂಲಕ ತಾನೇ ಬಾಡಿಗೆ ಕಟ್ಟಿ ತೆರೆದಿದ್ದ ಕಾಂಗ್ರೆಸ್ ಕಚೇರಿಗೆ ಹೋಗುವುದನ್ನು ಪೂಜಾರಿ ಅವರು ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ನಿಷ್ಠುರವಾದಿಯಾದ ನೇರ ನಡೆ- ನುಡಿಯ ಪೂಜಾರಿ ಅವರು ನಂತರದ ದಿನಗಳಲ್ಲಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್ ಸರಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದೀಗ ಅದೆಲ್ಲ ಇತಿಹಾಸ.

ಇತ್ತೀಚಿನ ಸುದ್ದಿ

ಜಾಹೀರಾತು