10:48 PM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮತ್ತೆ ಕೊರೊನಾ ಹೆಚ್ಚಳ: ಖ್ಯಾತ ಹೃದಯ ತಜ್ಞ  ಡಾ.ದೇವಿ ಶೆಟ್ಟಿ ವೈರಾಣು ಸೋಂಕಿನ ಬಗ್ಗೆ ಹೇಳಿದ್ದೇನು?

25/04/2022, 23:39

ಹೊಸದಿಲ್ಲಿ(reporterkarnataka.com):ಕೊರೊನಾ 4ನೇ ಅಲೆಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಭಯ ಬೇಡ ಎಚ್ಚರ ವಹಿಸಿ ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಶೆಟ್ಟಿ ಸಲಹೆ ನೀಡಿದ್ದಾರೆ.

ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿಸಿದರೆ ಸಾಕು. ನಮ್ಮ ನಿಗಾ ಸೋಂಕಿಗೆ ತುತ್ತಾದವರ ಮೇಲಲ್ಲ. ಬದಲಿಗೆ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಮೇಲಿರಬೇಕು ಎಂದು ಹೇಳಿದ್ದಾರೆ.

ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜನರು ಮಾಸ್ಕ್ ಧರಿಸುವುದನ್ನು ಮುಂದುವರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಮೂರನೇ ಅಲೆಯ ಅಷ್ಟು ಗಂಭೀರವಾಗಿರಲಿಲ್ಲ, ಆದ್ದರಿಂದ ಭಯ ಪಡುವ ಅಗತ್ಯವಿಲ್ಲ. ನಾವು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಖ್ಯೆಯನ್ನು ಮಾತ್ರ ನೋಡಬೇಕು. ಒಂದು ಲಕ್ಷ ಜನರು ಅಥವಾ 50,000 ಜನರು ಸೋಂಕಿಗೆ ತುತ್ತಾಗುತ್ತಾರೆ ಎಂದರೆ ಏನೂ ಅರ್ಥವಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಎಂದು ದೇವಿ ಶೆಟ್ಟಿ ಹೇಳಿದರು.

ಇಡೀ ದೇಶವು ಸೋಂಕಿಗೆ ತುತ್ತಾಗಬಹುದು, ಆದರೆ ಆಸ್ಪತ್ರೆಯಲ್ಲಿ ಯಾವುದೇ ಕೋವಿಡ್ ರೋಗಿಗಳಿಲ್ಲದಿದ್ದರೆ, ಯಾವುದೇ ಆತಂಕವಿಲ್ಲ. ಆದ್ದರಿಂದ ಆಸ್ಪತ್ರೆಯಲ್ಲಿನ ರೋಗಿಗಳ ಸಂಖ್ಯೆಯ ಮೇಲೆ ನಿಗಾ ವಹಿಸಬೇಕು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು