4:43 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮತ್ತೆ ಕೊರೊನಾ ಹೆಚ್ಚಳ: ಖ್ಯಾತ ಹೃದಯ ತಜ್ಞ  ಡಾ.ದೇವಿ ಶೆಟ್ಟಿ ವೈರಾಣು ಸೋಂಕಿನ ಬಗ್ಗೆ ಹೇಳಿದ್ದೇನು?

25/04/2022, 23:39

ಹೊಸದಿಲ್ಲಿ(reporterkarnataka.com):ಕೊರೊನಾ 4ನೇ ಅಲೆಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಭಯ ಬೇಡ ಎಚ್ಚರ ವಹಿಸಿ ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಶೆಟ್ಟಿ ಸಲಹೆ ನೀಡಿದ್ದಾರೆ.

ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿಸಿದರೆ ಸಾಕು. ನಮ್ಮ ನಿಗಾ ಸೋಂಕಿಗೆ ತುತ್ತಾದವರ ಮೇಲಲ್ಲ. ಬದಲಿಗೆ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಮೇಲಿರಬೇಕು ಎಂದು ಹೇಳಿದ್ದಾರೆ.

ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜನರು ಮಾಸ್ಕ್ ಧರಿಸುವುದನ್ನು ಮುಂದುವರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಮೂರನೇ ಅಲೆಯ ಅಷ್ಟು ಗಂಭೀರವಾಗಿರಲಿಲ್ಲ, ಆದ್ದರಿಂದ ಭಯ ಪಡುವ ಅಗತ್ಯವಿಲ್ಲ. ನಾವು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಖ್ಯೆಯನ್ನು ಮಾತ್ರ ನೋಡಬೇಕು. ಒಂದು ಲಕ್ಷ ಜನರು ಅಥವಾ 50,000 ಜನರು ಸೋಂಕಿಗೆ ತುತ್ತಾಗುತ್ತಾರೆ ಎಂದರೆ ಏನೂ ಅರ್ಥವಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಎಂದು ದೇವಿ ಶೆಟ್ಟಿ ಹೇಳಿದರು.

ಇಡೀ ದೇಶವು ಸೋಂಕಿಗೆ ತುತ್ತಾಗಬಹುದು, ಆದರೆ ಆಸ್ಪತ್ರೆಯಲ್ಲಿ ಯಾವುದೇ ಕೋವಿಡ್ ರೋಗಿಗಳಿಲ್ಲದಿದ್ದರೆ, ಯಾವುದೇ ಆತಂಕವಿಲ್ಲ. ಆದ್ದರಿಂದ ಆಸ್ಪತ್ರೆಯಲ್ಲಿನ ರೋಗಿಗಳ ಸಂಖ್ಯೆಯ ಮೇಲೆ ನಿಗಾ ವಹಿಸಬೇಕು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು