12:13 PM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಮತ್ತೆ ಕೊರೊನಾ ಹೆಚ್ಚಳ: ಖ್ಯಾತ ಹೃದಯ ತಜ್ಞ  ಡಾ.ದೇವಿ ಶೆಟ್ಟಿ ವೈರಾಣು ಸೋಂಕಿನ ಬಗ್ಗೆ ಹೇಳಿದ್ದೇನು?

25/04/2022, 23:39

ಹೊಸದಿಲ್ಲಿ(reporterkarnataka.com):ಕೊರೊನಾ 4ನೇ ಅಲೆಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಭಯ ಬೇಡ ಎಚ್ಚರ ವಹಿಸಿ ಎಂದು ಖ್ಯಾತ ಹೃದಯ ತಜ್ಞ ಡಾ. ದೇವಿ ಶೆಟ್ಟಿ ಸಲಹೆ ನೀಡಿದ್ದಾರೆ.

ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿಸಿದರೆ ಸಾಕು. ನಮ್ಮ ನಿಗಾ ಸೋಂಕಿಗೆ ತುತ್ತಾದವರ ಮೇಲಲ್ಲ. ಬದಲಿಗೆ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಮೇಲಿರಬೇಕು ಎಂದು ಹೇಳಿದ್ದಾರೆ.

ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜನರು ಮಾಸ್ಕ್ ಧರಿಸುವುದನ್ನು ಮುಂದುವರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಮೂರನೇ ಅಲೆಯ ಅಷ್ಟು ಗಂಭೀರವಾಗಿರಲಿಲ್ಲ, ಆದ್ದರಿಂದ ಭಯ ಪಡುವ ಅಗತ್ಯವಿಲ್ಲ. ನಾವು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಖ್ಯೆಯನ್ನು ಮಾತ್ರ ನೋಡಬೇಕು. ಒಂದು ಲಕ್ಷ ಜನರು ಅಥವಾ 50,000 ಜನರು ಸೋಂಕಿಗೆ ತುತ್ತಾಗುತ್ತಾರೆ ಎಂದರೆ ಏನೂ ಅರ್ಥವಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಎಂದು ದೇವಿ ಶೆಟ್ಟಿ ಹೇಳಿದರು.

ಇಡೀ ದೇಶವು ಸೋಂಕಿಗೆ ತುತ್ತಾಗಬಹುದು, ಆದರೆ ಆಸ್ಪತ್ರೆಯಲ್ಲಿ ಯಾವುದೇ ಕೋವಿಡ್ ರೋಗಿಗಳಿಲ್ಲದಿದ್ದರೆ, ಯಾವುದೇ ಆತಂಕವಿಲ್ಲ. ಆದ್ದರಿಂದ ಆಸ್ಪತ್ರೆಯಲ್ಲಿನ ರೋಗಿಗಳ ಸಂಖ್ಯೆಯ ಮೇಲೆ ನಿಗಾ ವಹಿಸಬೇಕು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು