12:56 PM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಮತ್ತೆ ಖದರ್!: ಎಸ್ ಡಿಪಿಐ ಜತೆಗಿನ ತಾಂಟುವ ಆಟದಲ್ಲಿ ಅಂತರ ಹೆಚ್ಚಿಸಿ ಗೆದ್ದ ಖಾದರ್!

13/05/2023, 22:37

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲರ ಲೆಕ್ಕಾಚಾರದಂತೆ ಮಂಗಳೂರು ಕ್ಷೇತ್ರದಿಂದ
ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಜತೆಗೆ ಗೆಲುವಿನ‌ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ.
ಸತತ 5ನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಿರುವ ಖಾದರ್ ಅವರಿಗೆ ಈ ಬಾರಿ ಟಫ್ ಫೈಟ್ ಎದುರಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಲೆಕ್ಕಾಚಾರ ಹಾಕಿದ್ದರು. ಕಾರಣ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಪರಂಗಿಪೇಟೆ ಅವರು ತೊಡೆ ತಟ್ಟಿ ಖಾದರ್ ವಿರುದ್ಧ ಸ್ಪರ್ಧೆಗಿಳಿದಿದ್ದರು. ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿಂತ ಹೆಚ್ಚು ಖಾದರ್ ವಿರುದ್ಧ ಆರೋಪವನ್ನು ರಿಯಾಜ್ ಮಾಡಿದ್ದರು. ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿ ಗಳಾಗಿರುವುದರಿಂದ ಒಂದೇ ಸಮುದಾಯದೊಳಗಿನ ಜಗಳ ಮಾರನೇ ವ್ಯಕ್ತಿಗೆ ಸಹಾಯ ಮಾಡಿತು ಎಂದು ಜನರು ಅಂದುಕೊಂಡಿದ್ದರು. ಖಾದರ್- ರಿಯಾಜ್ ಫೈಟ್ ನಿಂದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ನೆರವಾದೀತು ಎಂಬ ಲೆಕ್ಕಾಚಾರ ಕೇಳಿ ಬಂದಿತ್ತು. ಆದರೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಲೆಕ್ಕಾಚಾರವೆಲ್ಲ ತಲೆ ಕೆಳಗಾಗಿದೆ. ಎಸ್ ಡಿಪಿಐ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಮತ ಬಾಚಿಕೊಂಡರೂ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಂದ 23 ಸಾವಿರ ಮತಗಳ ಅಂತರದಲ್ಲಿ ಖಾದರ್ ಗೆಲುವಿನ ನಗೆ ಹೊರಸೂಸಿದ್ದಾರೆ.




ಖಾದರ್ ಗೆಲುವಿನ ಓಟವನ್ನು ತಡೆಯಲು ಬಿಜೆಪಿ ಪಾಳಯದಲ್ಲಿ ಭಾರೀ ಕಾರ್ಯತಂತ್ರ ನಡೆಯಲಿದೆ ಎಂಬ ಮಾಹಿತಿ ಆರಂಭದಲ್ಲಿದ್ದರೂ ನಂತರ ಅದು ಠುಸ್ ಎನಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನು ಬಹುತೇಕ ಕ್ಷೇತ್ರಗಳಿಗೆ ಕರೆಸಿ ರೋಡ್ ಶೋ ನಡೆಸಿದ್ದರೂ ಸತೀಶ್ ಕುಂಪಲ ಪರ ಯಾವುದೇ ಸ್ಟಾರ್ ಕ್ಯಾಂಪೇನರ್ ಗಳನ್ನು ಕರೆಸದೆ ಬಿಜೆಪಿ ಕೈಚೆಲ್ಲಿ ಕುಳಿತ್ತಿತ್ತು. ಒಂದು ರೀತಿಯಲ್ಲಿ ಬಿಜೆಪಿ ಇಲ್ಲಿ ಸತೀಶ್ ಕುಂಪಲ ಅವರನ್ನು ಬಲಿಪಶು ಮಾಡಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು