7:09 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮತ್ತೆ ಖದರ್!: ಎಸ್ ಡಿಪಿಐ ಜತೆಗಿನ ತಾಂಟುವ ಆಟದಲ್ಲಿ ಅಂತರ ಹೆಚ್ಚಿಸಿ ಗೆದ್ದ ಖಾದರ್!

13/05/2023, 22:37

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲರ ಲೆಕ್ಕಾಚಾರದಂತೆ ಮಂಗಳೂರು ಕ್ಷೇತ್ರದಿಂದ
ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಜತೆಗೆ ಗೆಲುವಿನ‌ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ.
ಸತತ 5ನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಿರುವ ಖಾದರ್ ಅವರಿಗೆ ಈ ಬಾರಿ ಟಫ್ ಫೈಟ್ ಎದುರಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಲೆಕ್ಕಾಚಾರ ಹಾಕಿದ್ದರು. ಕಾರಣ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಪರಂಗಿಪೇಟೆ ಅವರು ತೊಡೆ ತಟ್ಟಿ ಖಾದರ್ ವಿರುದ್ಧ ಸ್ಪರ್ಧೆಗಿಳಿದಿದ್ದರು. ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿಂತ ಹೆಚ್ಚು ಖಾದರ್ ವಿರುದ್ಧ ಆರೋಪವನ್ನು ರಿಯಾಜ್ ಮಾಡಿದ್ದರು. ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿ ಗಳಾಗಿರುವುದರಿಂದ ಒಂದೇ ಸಮುದಾಯದೊಳಗಿನ ಜಗಳ ಮಾರನೇ ವ್ಯಕ್ತಿಗೆ ಸಹಾಯ ಮಾಡಿತು ಎಂದು ಜನರು ಅಂದುಕೊಂಡಿದ್ದರು. ಖಾದರ್- ರಿಯಾಜ್ ಫೈಟ್ ನಿಂದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ನೆರವಾದೀತು ಎಂಬ ಲೆಕ್ಕಾಚಾರ ಕೇಳಿ ಬಂದಿತ್ತು. ಆದರೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಲೆಕ್ಕಾಚಾರವೆಲ್ಲ ತಲೆ ಕೆಳಗಾಗಿದೆ. ಎಸ್ ಡಿಪಿಐ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಮತ ಬಾಚಿಕೊಂಡರೂ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಂದ 23 ಸಾವಿರ ಮತಗಳ ಅಂತರದಲ್ಲಿ ಖಾದರ್ ಗೆಲುವಿನ ನಗೆ ಹೊರಸೂಸಿದ್ದಾರೆ.




ಖಾದರ್ ಗೆಲುವಿನ ಓಟವನ್ನು ತಡೆಯಲು ಬಿಜೆಪಿ ಪಾಳಯದಲ್ಲಿ ಭಾರೀ ಕಾರ್ಯತಂತ್ರ ನಡೆಯಲಿದೆ ಎಂಬ ಮಾಹಿತಿ ಆರಂಭದಲ್ಲಿದ್ದರೂ ನಂತರ ಅದು ಠುಸ್ ಎನಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನು ಬಹುತೇಕ ಕ್ಷೇತ್ರಗಳಿಗೆ ಕರೆಸಿ ರೋಡ್ ಶೋ ನಡೆಸಿದ್ದರೂ ಸತೀಶ್ ಕುಂಪಲ ಪರ ಯಾವುದೇ ಸ್ಟಾರ್ ಕ್ಯಾಂಪೇನರ್ ಗಳನ್ನು ಕರೆಸದೆ ಬಿಜೆಪಿ ಕೈಚೆಲ್ಲಿ ಕುಳಿತ್ತಿತ್ತು. ಒಂದು ರೀತಿಯಲ್ಲಿ ಬಿಜೆಪಿ ಇಲ್ಲಿ ಸತೀಶ್ ಕುಂಪಲ ಅವರನ್ನು ಬಲಿಪಶು ಮಾಡಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು