6:51 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮತ್ತೆ ಖದರ್!: ಎಸ್ ಡಿಪಿಐ ಜತೆಗಿನ ತಾಂಟುವ ಆಟದಲ್ಲಿ ಅಂತರ ಹೆಚ್ಚಿಸಿ ಗೆದ್ದ ಖಾದರ್!

13/05/2023, 22:37

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲರ ಲೆಕ್ಕಾಚಾರದಂತೆ ಮಂಗಳೂರು ಕ್ಷೇತ್ರದಿಂದ
ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಜತೆಗೆ ಗೆಲುವಿನ‌ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ.
ಸತತ 5ನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಿರುವ ಖಾದರ್ ಅವರಿಗೆ ಈ ಬಾರಿ ಟಫ್ ಫೈಟ್ ಎದುರಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಲೆಕ್ಕಾಚಾರ ಹಾಕಿದ್ದರು. ಕಾರಣ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಪರಂಗಿಪೇಟೆ ಅವರು ತೊಡೆ ತಟ್ಟಿ ಖಾದರ್ ವಿರುದ್ಧ ಸ್ಪರ್ಧೆಗಿಳಿದಿದ್ದರು. ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿಂತ ಹೆಚ್ಚು ಖಾದರ್ ವಿರುದ್ಧ ಆರೋಪವನ್ನು ರಿಯಾಜ್ ಮಾಡಿದ್ದರು. ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿ ಗಳಾಗಿರುವುದರಿಂದ ಒಂದೇ ಸಮುದಾಯದೊಳಗಿನ ಜಗಳ ಮಾರನೇ ವ್ಯಕ್ತಿಗೆ ಸಹಾಯ ಮಾಡಿತು ಎಂದು ಜನರು ಅಂದುಕೊಂಡಿದ್ದರು. ಖಾದರ್- ರಿಯಾಜ್ ಫೈಟ್ ನಿಂದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ನೆರವಾದೀತು ಎಂಬ ಲೆಕ್ಕಾಚಾರ ಕೇಳಿ ಬಂದಿತ್ತು. ಆದರೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಲೆಕ್ಕಾಚಾರವೆಲ್ಲ ತಲೆ ಕೆಳಗಾಗಿದೆ. ಎಸ್ ಡಿಪಿಐ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಮತ ಬಾಚಿಕೊಂಡರೂ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಂದ 23 ಸಾವಿರ ಮತಗಳ ಅಂತರದಲ್ಲಿ ಖಾದರ್ ಗೆಲುವಿನ ನಗೆ ಹೊರಸೂಸಿದ್ದಾರೆ.




ಖಾದರ್ ಗೆಲುವಿನ ಓಟವನ್ನು ತಡೆಯಲು ಬಿಜೆಪಿ ಪಾಳಯದಲ್ಲಿ ಭಾರೀ ಕಾರ್ಯತಂತ್ರ ನಡೆಯಲಿದೆ ಎಂಬ ಮಾಹಿತಿ ಆರಂಭದಲ್ಲಿದ್ದರೂ ನಂತರ ಅದು ಠುಸ್ ಎನಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನು ಬಹುತೇಕ ಕ್ಷೇತ್ರಗಳಿಗೆ ಕರೆಸಿ ರೋಡ್ ಶೋ ನಡೆಸಿದ್ದರೂ ಸತೀಶ್ ಕುಂಪಲ ಪರ ಯಾವುದೇ ಸ್ಟಾರ್ ಕ್ಯಾಂಪೇನರ್ ಗಳನ್ನು ಕರೆಸದೆ ಬಿಜೆಪಿ ಕೈಚೆಲ್ಲಿ ಕುಳಿತ್ತಿತ್ತು. ಒಂದು ರೀತಿಯಲ್ಲಿ ಬಿಜೆಪಿ ಇಲ್ಲಿ ಸತೀಶ್ ಕುಂಪಲ ಅವರನ್ನು ಬಲಿಪಶು ಮಾಡಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು