7:33 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮತ್ತೆ ಖಾಸಗಿ ಬಸ್ ಅಟ್ಟಹಾಸ: ಮಹಿಳೆ ಬಲಿ; ಇದು ರಸ್ತೆ ಭಯೋತ್ಪಾದನೆ ಅಲ್ವೇ? ಎನ್ನುವುದು ಜನರ ಪ್ರಶ್ನೆ; ಎಸಿಪಿಯವರೇ ದಯವಿಟ್ಟು ಉತ್ತರಿಸಿ

30/03/2023, 15:36

ಮಂಗಳೂರು(reporterkarnataka.com): ಖಾಸಗಿ ಬಸ್ಸುಗಳ ಅಟ್ಟಹಾಸಕ್ಕೆ ಒಂದೇ ವಾರದಲ್ಲಿ ಒಂದೇ ಕಡೆ ಎರಡನೇ ಬಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಸಿಟಿ ಬಸ್ಸೊಂದು ಅಪೋಷಣ ಮಾಡಿದ ಘಟನೆ ನಗರದ ಬೆಂದೂರ್ ವೆಲ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.
ಕಂಕನಾಡಿ ಕಡೆಗೆ ಚಲಿಸುತ್ತಿದ್ದ ಸಿಟಿ ಬಸ್ ಬೆಂದೂರ್ ವೆಲ್ ಸಮೀಪ ರಸ್ತೆ ದಾಟುತ್ತಿದ್ದಾಗ ಮಹಿಳೆಯ ಮೇಲೆ ಹರಿದು ಹೋದ ಪರಿಣಾಮ ಮಹಿಳೆ
ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಬಸ್ ಚಾಲಕನ ನಿರ್ಲಕ್ಷ್ಯಹಾಗೂ ಅಜಾಕರೂಕತೆಯ ಚಾಲನೆಯಿಂದ ಈ ದುರ್ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಮೃತ ಮಹಿಳೆ ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
ಅಪರಾಧ ಮತ್ತು ಟ್ರಾಫಿಕ್ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಗೀತಾ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂದೂರುವೆಲ್ ಜಂಕ್ಷನ್ ನಲ್ಲಿ ಮಾರ್ಚ್ 24 ರಂದು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು11 ವರ್ಷದ ಬಾಲಕ ಸಾವನ್ನಪ್ಪಿದ್ದ. ಸ್ಕೂಟರ್ ಚಾಲನೆ ಮಾಡುತ್ತಿದ್ದ ಬಾಲಕನ ತಾಯಿ ತೀವ್ರವಾಗಿ ಗಾಯಗೊಂಡಿದ್ದರು. ಅದಕ್ಕಿಂತ ಸ್ವಲ್ಪ ದಿನ ಮುನ್ನ ನಂತೂರು ಜಂಕ್ಷನ್ ನಲ್ಲಿ ಟಿಪ್ಪರ್ ಲಾರಿ ಚಾಲಕ ಸ್ಕೂಟರ್ ವೊಂದನ್ನು ಅಡಿಗೆ ಹಾಕಿ ಇಬ್ಬರ ಸಾವಿಗೆ ಕಾರಣನಾಗಿದ್ದ. ಸಾವನ್ನಪ್ಪಿದವರಲ್ಲಿ ಬಾಲಕಿ ಸೇರಿದ್ದಳು. ಇದೊಂದು ರೀತಿಯ ರಸ್ತೆ ಭಯೋತ್ಪಾದನೆ ಅಲ್ವೇ ಎಂದು ಮಂಗಳೂರು ನಾಗರಿಕರು ಪ್ರಶ್ಬಿಸುತ್ತಿದ್ದಾರೆ. ಟ್ರಾಫಿಕ್ ಎಸಿಪಿಯವರೇ ದಯವಿಟ್ಟು ಉತ್ತರ ಕೊಡಿ.

ಇತ್ತೀಚಿನ ಸುದ್ದಿ

ಜಾಹೀರಾತು