4:54 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮತ್ತೆ ಖಾಸಗಿ ಬಸ್ ಅಟ್ಟಹಾಸ: ಮಹಿಳೆ ಬಲಿ; ಇದು ರಸ್ತೆ ಭಯೋತ್ಪಾದನೆ ಅಲ್ವೇ? ಎನ್ನುವುದು ಜನರ ಪ್ರಶ್ನೆ; ಎಸಿಪಿಯವರೇ ದಯವಿಟ್ಟು ಉತ್ತರಿಸಿ

30/03/2023, 15:36

ಮಂಗಳೂರು(reporterkarnataka.com): ಖಾಸಗಿ ಬಸ್ಸುಗಳ ಅಟ್ಟಹಾಸಕ್ಕೆ ಒಂದೇ ವಾರದಲ್ಲಿ ಒಂದೇ ಕಡೆ ಎರಡನೇ ಬಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಸಿಟಿ ಬಸ್ಸೊಂದು ಅಪೋಷಣ ಮಾಡಿದ ಘಟನೆ ನಗರದ ಬೆಂದೂರ್ ವೆಲ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.
ಕಂಕನಾಡಿ ಕಡೆಗೆ ಚಲಿಸುತ್ತಿದ್ದ ಸಿಟಿ ಬಸ್ ಬೆಂದೂರ್ ವೆಲ್ ಸಮೀಪ ರಸ್ತೆ ದಾಟುತ್ತಿದ್ದಾಗ ಮಹಿಳೆಯ ಮೇಲೆ ಹರಿದು ಹೋದ ಪರಿಣಾಮ ಮಹಿಳೆ
ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಬಸ್ ಚಾಲಕನ ನಿರ್ಲಕ್ಷ್ಯಹಾಗೂ ಅಜಾಕರೂಕತೆಯ ಚಾಲನೆಯಿಂದ ಈ ದುರ್ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಮೃತ ಮಹಿಳೆ ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
ಅಪರಾಧ ಮತ್ತು ಟ್ರಾಫಿಕ್ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಗೀತಾ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂದೂರುವೆಲ್ ಜಂಕ್ಷನ್ ನಲ್ಲಿ ಮಾರ್ಚ್ 24 ರಂದು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು11 ವರ್ಷದ ಬಾಲಕ ಸಾವನ್ನಪ್ಪಿದ್ದ. ಸ್ಕೂಟರ್ ಚಾಲನೆ ಮಾಡುತ್ತಿದ್ದ ಬಾಲಕನ ತಾಯಿ ತೀವ್ರವಾಗಿ ಗಾಯಗೊಂಡಿದ್ದರು. ಅದಕ್ಕಿಂತ ಸ್ವಲ್ಪ ದಿನ ಮುನ್ನ ನಂತೂರು ಜಂಕ್ಷನ್ ನಲ್ಲಿ ಟಿಪ್ಪರ್ ಲಾರಿ ಚಾಲಕ ಸ್ಕೂಟರ್ ವೊಂದನ್ನು ಅಡಿಗೆ ಹಾಕಿ ಇಬ್ಬರ ಸಾವಿಗೆ ಕಾರಣನಾಗಿದ್ದ. ಸಾವನ್ನಪ್ಪಿದವರಲ್ಲಿ ಬಾಲಕಿ ಸೇರಿದ್ದಳು. ಇದೊಂದು ರೀತಿಯ ರಸ್ತೆ ಭಯೋತ್ಪಾದನೆ ಅಲ್ವೇ ಎಂದು ಮಂಗಳೂರು ನಾಗರಿಕರು ಪ್ರಶ್ಬಿಸುತ್ತಿದ್ದಾರೆ. ಟ್ರಾಫಿಕ್ ಎಸಿಪಿಯವರೇ ದಯವಿಟ್ಟು ಉತ್ತರ ಕೊಡಿ.

ಇತ್ತೀಚಿನ ಸುದ್ದಿ

ಜಾಹೀರಾತು