7:46 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮತ್ತೆ ಮತ್ತೆ ಭೂಕಂಪನ: ನಡುಗಿದ ಕಲ್ಲುಗುಂಡಿ, ಸಂಪಾಜೆ; ಭಯಬೇಡ, ಪಶ್ಚಾತ್ ಕಂಪನ ಅಷ್ಟೇ 

02/07/2022, 09:54

ಮಡಿಕೇರಿ(reporterkarnataka.com):
ಕೊಡಗು ಹಾಗೂ ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದೆ. ಇಂದು ಮುಂಜಾನೆ ‌ಭೂಮಿ ನಡುಗಿದೆ ಎಂಬ ಮಾಹಿತಿ ಇದೆ. ಭೂಕಂಪನದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರೀ ಶಬ್ದದೊಂದಿಗೆ 6ನೇ ಬಾರಿ ಭೂಮಿ ಕಂಪಿಸಿದೆ. ಕಲ್ಲುಗುಂಡಿ , ಸಂಪಾಜೆ ಭಾಗಗಳಲ್ಲಿ ಭೂಮಿ ನಡುಗಿದೆ ಎನ್ನಲಾಗಿದೆ.

ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಂತಹ ‌ಸಂದೇಶಗಳಿಂದ ಜನರು ಭಯಪಡಬಾರದು. ಒಮ್ಮೆ ಕಂಪನವಾದಲ್ಲಿ ಅದರ ಪರಿಣಾಮ ಕೆಲವು ದಿನಗಳವರೆಗೆ ಇರುತ್ತದೆ. ಭೂಮಿಯ ಕೆಳಭಾಗದಲ್ಲಿ ನಡೆಯುತ್ತಿರುವ ನೈಸರ್ಗಿಕ ವಿದ್ಯಮಾನಗಳ ಪರಿಣಾಮ ಸಣ್ಣನೆಯ ಕಂಪನಗಳು ಸಂಭವಿಸಬಹುದು.

ಭೂಸ್ತರಭಂಗದಿಂದ ಕೆಲವು ದಿನ ಈ ನಡುಕ, ಕಂಪನಗಳು ನಡೆಯುವ ಸಾಧ್ಯತೆ ಇದ್ದು ಜನ ಆತಂಕಪಡಬೇಕಿಲ್ಲ ಎಂದು ಭೂಗರ್ಭ ತಜ್ಞರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು