9:51 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಫೋನ್ ಸದ್ದು: ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಗ್ನಲ್ ಪತ್ತೆ?

05/06/2022, 22:08

ಮಂಗಳೂರು(reporterkarnataka.com):ಕರಾವಳಿ ಪ್ರದೇಶದಲ್ಲಿ ಉಗ್ರಗಾಮಿ, ನಕ್ಸಲ್ ಚಟುವಟಿಕೆ ನಡೆಯುತ್ತಿದೆಯೇ? ಅಂತಹದೊಂದು ಗುಮಾನಿಗೆ ಮತ್ತೆ ಜೀವ ಬಂದಿದೆ. ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಈಗಾಗಲೇ ಹಲವು ಬಾರಿ ಮತ್ತೆಯಾಗಿದೆ. ಇದೀಗ ಮತ್ತೆ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉಗ್ರಗಾಮಿಗಳ ಸ್ಲೀಪರ್ ಸೆಲ್‌ಗಳು ಕಾರ್ಯಾಚರಿಸುತ್ತಿವೆ ಎಂಬ ಗುಮಾನಿ ನಡುವೆ ಸ್ಯಾಟಲೈಟ್ ಫೋನ್ ಬಳಕೆ ಮತ್ತೆ ಮತ್ತೆ ಪತ್ತೆಯಾಗುತ್ತಿರುವುದು ಪೊಲೀಸ್ ಇಲಾಖೆಗೆ

 ಆತಂಕ ಮೂಡಿಸಿದೆ. 6 ತಿಂಗಳ ಬಳಿಕ ಕರಾವಳಿಯ 3 ಕಡೆಗಳಲ್ಲಿ ಹಾಗೂ ಚಿಕ್ಕಮಗಳೂರಿನ ದಟ್ಟಾರಣ್ಯದಲ್ಲಿ ನಿಷೇಧಿತ ಸ್ಯಾಟಟೈಟ್ ಫೋನ್‌ಗಳ ಸಿಗ್ನಲ್ ಪತ್ತೆಯಾಗಿದೆ. ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಟೈಟ್ ಫೋನ್ ಬಳಕೆ ಮಾಡಿರುವುದನ್ನು ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಸ್ಥಳಕ್ಕೆ ತೆರಳಿ ತನಿಖೆ ಕೈಗೆತ್ತಿಕೊಂಡಿದೆ. ಕಳೆದ 10 ದಿನಗಳ ಅವಧಿಯಲ್ಲಿ ನಾಲ್ಕು ಕಡೆಗಳಿಂದ ಸ್ಯಾಟಲೈಟ್ ಫೋನ್ ಸಿಗ್ನಲ್ ಸಂಪರ್ಕಿಸಿರುವುದು ಪತ್ತೆಯಾಗಿದೆ. ಈ ಬಾರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ

– ಶಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ, ಮಂಗಳೂರು ನಗರ ಹೊರಭಾಗದ ನಾಟೆಕಲ್, ಕುಳಾಯಿ ಹಾಗೂ ಚಿಕ್ಕಮಗಳೂರಿನ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಿಗ್ನಲ್ ಪತ್ತೆಯಾದ ಪ್ರದೇಶಗಳಿಗೆ ತೆರಳಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು