10:31 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಫೋನ್ ಸದ್ದು: ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಗ್ನಲ್ ಪತ್ತೆ?

05/06/2022, 22:08

ಮಂಗಳೂರು(reporterkarnataka.com):ಕರಾವಳಿ ಪ್ರದೇಶದಲ್ಲಿ ಉಗ್ರಗಾಮಿ, ನಕ್ಸಲ್ ಚಟುವಟಿಕೆ ನಡೆಯುತ್ತಿದೆಯೇ? ಅಂತಹದೊಂದು ಗುಮಾನಿಗೆ ಮತ್ತೆ ಜೀವ ಬಂದಿದೆ. ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಈಗಾಗಲೇ ಹಲವು ಬಾರಿ ಮತ್ತೆಯಾಗಿದೆ. ಇದೀಗ ಮತ್ತೆ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉಗ್ರಗಾಮಿಗಳ ಸ್ಲೀಪರ್ ಸೆಲ್‌ಗಳು ಕಾರ್ಯಾಚರಿಸುತ್ತಿವೆ ಎಂಬ ಗುಮಾನಿ ನಡುವೆ ಸ್ಯಾಟಲೈಟ್ ಫೋನ್ ಬಳಕೆ ಮತ್ತೆ ಮತ್ತೆ ಪತ್ತೆಯಾಗುತ್ತಿರುವುದು ಪೊಲೀಸ್ ಇಲಾಖೆಗೆ

 ಆತಂಕ ಮೂಡಿಸಿದೆ. 6 ತಿಂಗಳ ಬಳಿಕ ಕರಾವಳಿಯ 3 ಕಡೆಗಳಲ್ಲಿ ಹಾಗೂ ಚಿಕ್ಕಮಗಳೂರಿನ ದಟ್ಟಾರಣ್ಯದಲ್ಲಿ ನಿಷೇಧಿತ ಸ್ಯಾಟಟೈಟ್ ಫೋನ್‌ಗಳ ಸಿಗ್ನಲ್ ಪತ್ತೆಯಾಗಿದೆ. ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಟೈಟ್ ಫೋನ್ ಬಳಕೆ ಮಾಡಿರುವುದನ್ನು ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಸ್ಥಳಕ್ಕೆ ತೆರಳಿ ತನಿಖೆ ಕೈಗೆತ್ತಿಕೊಂಡಿದೆ. ಕಳೆದ 10 ದಿನಗಳ ಅವಧಿಯಲ್ಲಿ ನಾಲ್ಕು ಕಡೆಗಳಿಂದ ಸ್ಯಾಟಲೈಟ್ ಫೋನ್ ಸಿಗ್ನಲ್ ಸಂಪರ್ಕಿಸಿರುವುದು ಪತ್ತೆಯಾಗಿದೆ. ಈ ಬಾರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ

– ಶಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ, ಮಂಗಳೂರು ನಗರ ಹೊರಭಾಗದ ನಾಟೆಕಲ್, ಕುಳಾಯಿ ಹಾಗೂ ಚಿಕ್ಕಮಗಳೂರಿನ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಿಗ್ನಲ್ ಪತ್ತೆಯಾದ ಪ್ರದೇಶಗಳಿಗೆ ತೆರಳಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು