9:06 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ

12/06/2021, 17:57

ಮಂಗಳೂರು(reporterkarnataka news):

ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್‌ ಅಭಿಯಾನಕ್ಕೆ ಕರೆ ನೀಡಿವೆ.

ಇದೇ ಭಾನುವಾರ ಜೈ ತುಳುನಾಡ್‌ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸಂಘಟನೆಗಳು ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕೆ ಆಗ್ರಹಿಸಿ ಸರ್ಕಾರದ ಕದ ತಟ್ಟಲು ನಿರ್ಧರಿಸಿದ್ದು, ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಮತ್ತು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆಯೂ ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಟ್ವೀಟ್‌ ಅಭಿಯಾನ ಸೇರಿದಂತೆ ಅನೇಕ ರೀತಿಯ ಹೋರಾಟಗಳನ್ನು ತುಳು ಸಂಘಟನೆಗಳು ಮಾಡಿದ್ದವು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಭಾಷೆಯ ವಿಚಾರವಾಗಿ ಆಸಕ್ತಿ ತೋರಿಸದ ಕಾರಣ ಇನ್ನೂ ತುಳುವರ ಕನಸು ನನಸಾಗದೆ ಉಳಿದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಜೆಪಿ ಶಾಸಕರೇ ಇದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ. ಹೀಗಿದ್ದೂ ನಮ್ಮ ತುಳು ಭಾಷೆಗೊಂದು ಸಾಂವಿಧಾನಿಕ ಮಾನ್ಯತೆಯನ್ನು ಕೊಡಿಸಲು ಆಗದೆ ಇರೋದು ನಮ್ಮ ದೌರ್ಭಾಗ್ಯವಾಗಿದೆ.

ಭಾನುವಾರ ಬೆಳಗ್ಗೆಯಿಂದ ನಡೆಯುವ ಈ ಟ್ವೀಟ್‌ ಅಭಿಯಾನದಲ್ಲಿ #TuluOfficialinKA_KL ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡುವಂತೆ ಸಂಘಟಕರು ಜನರಲ್ಲಿ ವಿನಂತಿಸಿಕೊಂಡಿದ್ದು, ತುಳು ಭಾಷೆಗೆ ಅಧಿಕೃತ ಸಾಂವಿಧಾನಿಕ ಗೌರವ, ಸ್ಥಾನಮಾನ ಸಿಗಲು ಸರ್ಕಾರ ಮತ್ತು ಜನಪ್ರತಿನಿಧಿಗಳನ್ನು ಬಡಿದೆಬ್ಬಿಸೋದು ಅನಿವಾರ್ಯವಾಗಿದೆ. ಈ ಕಾರ್ಯಕ್ಕೆ ಸಮಸ್ತ ತುಳುವರು ಕೈಜೋಡಿಸುವಂತೆ ಜೈತುಳುನಾಡ್ ಸಂಘಟನೆಯ ಮುಖ್ಯಸ್ಥರು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು