12:15 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ

12/06/2021, 17:57

ಮಂಗಳೂರು(reporterkarnataka news):

ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್‌ ಅಭಿಯಾನಕ್ಕೆ ಕರೆ ನೀಡಿವೆ.

ಇದೇ ಭಾನುವಾರ ಜೈ ತುಳುನಾಡ್‌ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸಂಘಟನೆಗಳು ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕೆ ಆಗ್ರಹಿಸಿ ಸರ್ಕಾರದ ಕದ ತಟ್ಟಲು ನಿರ್ಧರಿಸಿದ್ದು, ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಮತ್ತು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆಯೂ ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಟ್ವೀಟ್‌ ಅಭಿಯಾನ ಸೇರಿದಂತೆ ಅನೇಕ ರೀತಿಯ ಹೋರಾಟಗಳನ್ನು ತುಳು ಸಂಘಟನೆಗಳು ಮಾಡಿದ್ದವು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಭಾಷೆಯ ವಿಚಾರವಾಗಿ ಆಸಕ್ತಿ ತೋರಿಸದ ಕಾರಣ ಇನ್ನೂ ತುಳುವರ ಕನಸು ನನಸಾಗದೆ ಉಳಿದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಜೆಪಿ ಶಾಸಕರೇ ಇದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ. ಹೀಗಿದ್ದೂ ನಮ್ಮ ತುಳು ಭಾಷೆಗೊಂದು ಸಾಂವಿಧಾನಿಕ ಮಾನ್ಯತೆಯನ್ನು ಕೊಡಿಸಲು ಆಗದೆ ಇರೋದು ನಮ್ಮ ದೌರ್ಭಾಗ್ಯವಾಗಿದೆ.

ಭಾನುವಾರ ಬೆಳಗ್ಗೆಯಿಂದ ನಡೆಯುವ ಈ ಟ್ವೀಟ್‌ ಅಭಿಯಾನದಲ್ಲಿ #TuluOfficialinKA_KL ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡುವಂತೆ ಸಂಘಟಕರು ಜನರಲ್ಲಿ ವಿನಂತಿಸಿಕೊಂಡಿದ್ದು, ತುಳು ಭಾಷೆಗೆ ಅಧಿಕೃತ ಸಾಂವಿಧಾನಿಕ ಗೌರವ, ಸ್ಥಾನಮಾನ ಸಿಗಲು ಸರ್ಕಾರ ಮತ್ತು ಜನಪ್ರತಿನಿಧಿಗಳನ್ನು ಬಡಿದೆಬ್ಬಿಸೋದು ಅನಿವಾರ್ಯವಾಗಿದೆ. ಈ ಕಾರ್ಯಕ್ಕೆ ಸಮಸ್ತ ತುಳುವರು ಕೈಜೋಡಿಸುವಂತೆ ಜೈತುಳುನಾಡ್ ಸಂಘಟನೆಯ ಮುಖ್ಯಸ್ಥರು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು