12:41 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ

12/06/2021, 17:57

ಮಂಗಳೂರು(reporterkarnataka news):

ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್‌ ಅಭಿಯಾನಕ್ಕೆ ಕರೆ ನೀಡಿವೆ.

ಇದೇ ಭಾನುವಾರ ಜೈ ತುಳುನಾಡ್‌ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸಂಘಟನೆಗಳು ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕೆ ಆಗ್ರಹಿಸಿ ಸರ್ಕಾರದ ಕದ ತಟ್ಟಲು ನಿರ್ಧರಿಸಿದ್ದು, ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಮತ್ತು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆಯೂ ತುಳು ಭಾಷೆಯ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಟ್ವೀಟ್‌ ಅಭಿಯಾನ ಸೇರಿದಂತೆ ಅನೇಕ ರೀತಿಯ ಹೋರಾಟಗಳನ್ನು ತುಳು ಸಂಘಟನೆಗಳು ಮಾಡಿದ್ದವು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಭಾಷೆಯ ವಿಚಾರವಾಗಿ ಆಸಕ್ತಿ ತೋರಿಸದ ಕಾರಣ ಇನ್ನೂ ತುಳುವರ ಕನಸು ನನಸಾಗದೆ ಉಳಿದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಜೆಪಿ ಶಾಸಕರೇ ಇದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ. ಹೀಗಿದ್ದೂ ನಮ್ಮ ತುಳು ಭಾಷೆಗೊಂದು ಸಾಂವಿಧಾನಿಕ ಮಾನ್ಯತೆಯನ್ನು ಕೊಡಿಸಲು ಆಗದೆ ಇರೋದು ನಮ್ಮ ದೌರ್ಭಾಗ್ಯವಾಗಿದೆ.

ಭಾನುವಾರ ಬೆಳಗ್ಗೆಯಿಂದ ನಡೆಯುವ ಈ ಟ್ವೀಟ್‌ ಅಭಿಯಾನದಲ್ಲಿ #TuluOfficialinKA_KL ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡುವಂತೆ ಸಂಘಟಕರು ಜನರಲ್ಲಿ ವಿನಂತಿಸಿಕೊಂಡಿದ್ದು, ತುಳು ಭಾಷೆಗೆ ಅಧಿಕೃತ ಸಾಂವಿಧಾನಿಕ ಗೌರವ, ಸ್ಥಾನಮಾನ ಸಿಗಲು ಸರ್ಕಾರ ಮತ್ತು ಜನಪ್ರತಿನಿಧಿಗಳನ್ನು ಬಡಿದೆಬ್ಬಿಸೋದು ಅನಿವಾರ್ಯವಾಗಿದೆ. ಈ ಕಾರ್ಯಕ್ಕೆ ಸಮಸ್ತ ತುಳುವರು ಕೈಜೋಡಿಸುವಂತೆ ಜೈತುಳುನಾಡ್ ಸಂಘಟನೆಯ ಮುಖ್ಯಸ್ಥರು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು