3:53 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮತ್ತೆರಡು ಬ್ಯಾಂಕ್ ಗಳ ಶೀಘ್ರ ಖಾಸಗೀಕರಣ?: ನೀತಿ ಆಯೋಗ ಶಿಫಾರಸು; ಕಳೆದ ಬಜೆಟ್ ನಲ್ಲೇ ಸೂಚನೆ ನೀಡಿದ್ದ ವಿತ್ತ ಸಚಿವೆ

10/06/2021, 08:14

ನವದೆಹಲಿ(reporterkarnataka news): ಕೇಂದ್ರ ಸರಕಾರದ ಬ್ಯಾಂಕ್ ಗಳ ಖಾಸಗೀಕರಣದ ಪ್ರಕ್ರಿಯೆ ಮುಂದುವರೆದಿದ್ದು, ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶೀಘ್ರದಲ್ಲೇ ಖಾಸಗೀಕರಣಗೊಳ್ಳುವ ಸಾಧ್ಯತೆಗಳಿವೆ. ನೀತಿ ಆಯೋಗ ಈ ಕುರಿತು ಶಿಫಾರಸು ಮಾಡಿದೆ.

ಕೇಂದ್ರ ಸರಕಾರದ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗ್ಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ. ಬಂಡವಾಳ ಹೂಡಿಕೆ ಮತ್ತು ಸಾರ್ವಜನಿಕ ಸೊತ್ತು ನಿರ್ವಹಣೆ ಇಲಾಖೆ ಹಾಗೂ ಆರ್ಥಿಕ ಸೇವಾ ಇಲಾಖೆಗಳು ನೀತಿ ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ, ಅದನ್ನು ಜಾರಿಗೊಳಿಸುವ ಬಗ್ಗೆ ಕಾನೂನಾತ್ಮಕ ಸಲಹೆ ನೀಡಲಿದೆ.

2020-21ರ ಸಾಲಿನ ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಂಕಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಸರಕಾರಿ ಒಡೆತನದ ಸಂಸ್ಥೆಗಳನ್ನು ಖಾಸಗೀಕರಿಸುವ ಬಗ್ಗೆ ಉಲ್ಲೇಖಿಸಿದ್ದರು. ಎರಡು ಸರಕಾರಿ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುತ್ತಿರುವುದಾಗಿ ತಿಳಿಸಿದ್ದರು.

ಹಾಲಿ ಆರ್ಥಿಕ ವರ್ಷದಲ್ಲಿ ಶೇರುಗಳ ಮಾರಾಟದಿಂದ 1.75 ಲಕ್ಷ ಕೋಟಿಗಳನ್ನು ಸಂಗ್ರಹಿಸಿಕೊಳ್ಳುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು