5:27 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮತ್ತೆರಡು ಬ್ಯಾಂಕ್ ಗಳ ಶೀಘ್ರ ಖಾಸಗೀಕರಣ?: ನೀತಿ ಆಯೋಗ ಶಿಫಾರಸು; ಕಳೆದ ಬಜೆಟ್ ನಲ್ಲೇ ಸೂಚನೆ ನೀಡಿದ್ದ ವಿತ್ತ ಸಚಿವೆ

10/06/2021, 08:14

ನವದೆಹಲಿ(reporterkarnataka news): ಕೇಂದ್ರ ಸರಕಾರದ ಬ್ಯಾಂಕ್ ಗಳ ಖಾಸಗೀಕರಣದ ಪ್ರಕ್ರಿಯೆ ಮುಂದುವರೆದಿದ್ದು, ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶೀಘ್ರದಲ್ಲೇ ಖಾಸಗೀಕರಣಗೊಳ್ಳುವ ಸಾಧ್ಯತೆಗಳಿವೆ. ನೀತಿ ಆಯೋಗ ಈ ಕುರಿತು ಶಿಫಾರಸು ಮಾಡಿದೆ.

ಕೇಂದ್ರ ಸರಕಾರದ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗ್ಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ. ಬಂಡವಾಳ ಹೂಡಿಕೆ ಮತ್ತು ಸಾರ್ವಜನಿಕ ಸೊತ್ತು ನಿರ್ವಹಣೆ ಇಲಾಖೆ ಹಾಗೂ ಆರ್ಥಿಕ ಸೇವಾ ಇಲಾಖೆಗಳು ನೀತಿ ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ, ಅದನ್ನು ಜಾರಿಗೊಳಿಸುವ ಬಗ್ಗೆ ಕಾನೂನಾತ್ಮಕ ಸಲಹೆ ನೀಡಲಿದೆ.

2020-21ರ ಸಾಲಿನ ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಂಕಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಸರಕಾರಿ ಒಡೆತನದ ಸಂಸ್ಥೆಗಳನ್ನು ಖಾಸಗೀಕರಿಸುವ ಬಗ್ಗೆ ಉಲ್ಲೇಖಿಸಿದ್ದರು. ಎರಡು ಸರಕಾರಿ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುತ್ತಿರುವುದಾಗಿ ತಿಳಿಸಿದ್ದರು.

ಹಾಲಿ ಆರ್ಥಿಕ ವರ್ಷದಲ್ಲಿ ಶೇರುಗಳ ಮಾರಾಟದಿಂದ 1.75 ಲಕ್ಷ ಕೋಟಿಗಳನ್ನು ಸಂಗ್ರಹಿಸಿಕೊಳ್ಳುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು