2:49 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಮತ್ತೆರಡು ಬ್ಯಾಂಕ್ ಗಳ ಶೀಘ್ರ ಖಾಸಗೀಕರಣ?: ನೀತಿ ಆಯೋಗ ಶಿಫಾರಸು; ಕಳೆದ ಬಜೆಟ್ ನಲ್ಲೇ ಸೂಚನೆ ನೀಡಿದ್ದ ವಿತ್ತ ಸಚಿವೆ

10/06/2021, 08:14

ನವದೆಹಲಿ(reporterkarnataka news): ಕೇಂದ್ರ ಸರಕಾರದ ಬ್ಯಾಂಕ್ ಗಳ ಖಾಸಗೀಕರಣದ ಪ್ರಕ್ರಿಯೆ ಮುಂದುವರೆದಿದ್ದು, ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶೀಘ್ರದಲ್ಲೇ ಖಾಸಗೀಕರಣಗೊಳ್ಳುವ ಸಾಧ್ಯತೆಗಳಿವೆ. ನೀತಿ ಆಯೋಗ ಈ ಕುರಿತು ಶಿಫಾರಸು ಮಾಡಿದೆ.

ಕೇಂದ್ರ ಸರಕಾರದ ‘ಆತ್ಮ ನಿರ್ಭರ್ ಭಾರತ‘ದ ಅನ್ವಯ ಖಾಸಗೀಕರಣದ ಬಗ್ಗೆ ನಿರ್ದೇಶನಗಳನ್ನು ನೀಡುವ ಹೊಣೆ ‘ನೀತಿ ಆಯೋಗ‘ದ ಮೇಲಿದೆ. ಬಂಡವಾಳ ಹೂಡಿಕೆ ಮತ್ತು ಸಾರ್ವಜನಿಕ ಸೊತ್ತು ನಿರ್ವಹಣೆ ಇಲಾಖೆ ಹಾಗೂ ಆರ್ಥಿಕ ಸೇವಾ ಇಲಾಖೆಗಳು ನೀತಿ ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ, ಅದನ್ನು ಜಾರಿಗೊಳಿಸುವ ಬಗ್ಗೆ ಕಾನೂನಾತ್ಮಕ ಸಲಹೆ ನೀಡಲಿದೆ.

2020-21ರ ಸಾಲಿನ ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಂಕಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಸರಕಾರಿ ಒಡೆತನದ ಸಂಸ್ಥೆಗಳನ್ನು ಖಾಸಗೀಕರಿಸುವ ಬಗ್ಗೆ ಉಲ್ಲೇಖಿಸಿದ್ದರು. ಎರಡು ಸರಕಾರಿ ಬ್ಯಾಂಕುಗಳನ್ನು ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪೆನಿಯನ್ನೂ ಖಾಸಗೀಕರಣ ಮಾಡುತ್ತಿರುವುದಾಗಿ ತಿಳಿಸಿದ್ದರು.

ಹಾಲಿ ಆರ್ಥಿಕ ವರ್ಷದಲ್ಲಿ ಶೇರುಗಳ ಮಾರಾಟದಿಂದ 1.75 ಲಕ್ಷ ಕೋಟಿಗಳನ್ನು ಸಂಗ್ರಹಿಸಿಕೊಳ್ಳುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು