12:35 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು

12/08/2021, 20:44

ಬಜಪೆ(reporterkarnataka.com)
ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್‌ಇಝಡ್‌ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ


ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್ಟರಿಯಲ್ಲಿ ನಡೆದಿದೆ.

ಕಳೆದ ಎಪ್ರಿಲ್‌ಲಲ್ಲಿ ಕೂಡ ಇದೇ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಬಗ್ಗೆ ದುರಸ್ತಿ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಈ ರೀತಿಯಾಗಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಬಗ್ಗೆ ಸಂಸ್ಥೆಯವರು ಖಚಿತ ಮಾಹಿತಿ ನೀಡಿಲ್ಲ. ಗುರುವಾರವು ಈ ಘಟಕದಲ್ಲಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್‌ಎಂಪಿಟಿ ಸಿಬ್ಬಂದಿ ವರ್ಗ ಬೆಂಕಿ ನಂದಿಸಿದರು.
ಘಟನಾ ಸ್ಥಳಕ್ಕೆ ಬಜೈ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು