5:58 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು

12/08/2021, 20:44

ಬಜಪೆ(reporterkarnataka.com)
ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್‌ಇಝಡ್‌ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ


ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್ಟರಿಯಲ್ಲಿ ನಡೆದಿದೆ.

ಕಳೆದ ಎಪ್ರಿಲ್‌ಲಲ್ಲಿ ಕೂಡ ಇದೇ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಬಗ್ಗೆ ದುರಸ್ತಿ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಈ ರೀತಿಯಾಗಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಬಗ್ಗೆ ಸಂಸ್ಥೆಯವರು ಖಚಿತ ಮಾಹಿತಿ ನೀಡಿಲ್ಲ. ಗುರುವಾರವು ಈ ಘಟಕದಲ್ಲಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್‌ಎಂಪಿಟಿ ಸಿಬ್ಬಂದಿ ವರ್ಗ ಬೆಂಕಿ ನಂದಿಸಿದರು.
ಘಟನಾ ಸ್ಥಳಕ್ಕೆ ಬಜೈ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು