10:57 PM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೇ 16ರಿಂದ 18: ಕಡಲನಗರಿ ಮಂಗಳೂರಿನಲ್ಲಿ ಮಾವು ಮೇಳ; ಬೆಳೆಗಾರರಿಗೆ ಅವಕಾಶ

05/05/2025, 19:46

ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮೇಳವನ್ನು ಮೇ 16ರಿಂದ 18 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಅರ್ಹ 20ರಿಂದ 25 ಮಾವು ಬೆಳೆಗಾರರಿಗೆ ಮಾವು ಹಣ್ಣು ಹಾಗೂ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡಲು ಕೆಳಕಂಡ ಷರತ್ತು ಹಾಗೂ ನಿಬಂಧನೆಗಳನೊಳಪಟ್ಟಂತೆ ಅವಕಾಶ ಕಲ್ಪಿಸಲಾಗಿರುತ್ತದೆ.
ಮಾವು ಬೆಳೆ ಉತ್ಪಾದಿಸುವ ಪ್ರದೇಶದ ಆರ್.ಟಿ.ಸಿಯನ್ನು ಒದಗಿಸಬೇಕು. ಸಂಬಂಧಪಟ್ಟ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರವರಿಂದ ರೈತರು ಮಾವು ಬೆಳೆಗಾರರಾಗಿದ್ದು, ನೈಸರ್ಗಿಕ ಹಣ್ಣು ಮಾಡುತ್ತಿರುವ ಬಗ್ಗೆ ಧೃಢೀಕರಣವನ್ನು ಪಡೆದು ಅರ್ಜಿ ಫಾರಂ ಜೊತೆ ಕಡ್ಡಾಯವಾಗಿ ಲಗತ್ತಿಸಬೇಕು. ಇಲ್ಲವಾದಲ್ಲಿ ಪರಿಗಣಿಸಲಾಗುವುದಿಲ್ಲ. ಸ್ವತಃ ಜಮೀನು ಹೊಂದಿದ್ದು, ಮಾವು ಬೆಳೆಗೆ ಆದ್ಯತೆ ನೀಡಲಾಗುತ್ತದೆ. ನೈಸರ್ಗಿಕ ಹಣ್ಣು ಮಾಡಲಾದ ಮಾವು ಹಣ್ಣುಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗುತ್ತದೆ.
ರೈತರು ಮತ್ತು ಅಧಿಕಾರಿಗಳ ಸಮಿತಿ ಸಭೆಯಲ್ಲಿ ನಿಗದಿಪಡಿಸಿದ ಮಾರಾಟ ದರದಂತೆ ಮಾರಾಟ ಮಾಡಲು ಬದ್ಧರಿರಬೇಕು. ಸಂಬಂಧಪಟ್ಟ ಇಲಾಖೆಯಿಂದ ದೃಢೀಕರಣಗೊಂಡ ತೂಕ ಮತ್ತು ಅಳತೆ ಯಂತ್ರಗಳನ್ನು ಮಾರಾಟದ ಸಮಯದಲ್ಲಿ ಬಳಸಲು ಅವಕಾಶ ಕಲ್ಪಿಸಲಾಗುತ್ತದೆ. ಸ್ಥಳೀಯ ಮಾರಾಟದಾರರಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಮೇ 5ರಿಂದ 9ರವರೆಗೆ ಅರ್ಜಿ ಫಾರಂನ್ನು ಪಡೆಯಬೇಕು. ಅರ್ಜಿ ಸಲ್ಲಿಸಲು ಮೇ 12 ಕೊನೆಯ ದಿನ. ಸಮಯ: ಅಪರಾಹ್ನ 3 ಗಂಟೆಯವರೆಗೆ ಸಂಪರ್ಕಿಸಬೇಕಾದ ಸಂಖ್ಯೆ: 0824-2423628, 0824-2444298.
ಮೇ 13ರಂದು ರೈತರ ಮತ್ತು ಅಧಿಕಾರಿಗಳ ಸಭೆ ನಡೆಸಿ ಮಾರಾಟ ದರ ನಿಗದಿಪಡಿಸುವ ಬಗ್ಗೆ ಚರ್ಚಿಸಿ ದರ ನಿಗದಿಪಡಿಸಲಾಗುವುದು ಹಾಗೂ ನಿಗದಿಪಡಿಸಲಾದ ದರಕ್ಕನುಗುಣವಾಗಿ ಮಾರಾಟ ಮಾಡಲು ಆಯ್ಕೆಯಾದ ರೈತರು ಬದ್ಧರಿರಬೇಕು.
ಆಸಕ್ತ ರೈತರು ಮಾವು ಮೇಳದಲ್ಲಿ ಹಣ್ಣು ಮತ್ತು ಇತರೆ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡಲು ಇಚ್ಛಿಸಿದ್ದಲ್ಲಿ, ಸ್ವವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಹಾಗೂ ಜಿಲ್ಲೆಯ ರೈತರು ಹಾಗೂ ಗ್ರಾಹಕರು ಮಾವು ಮೇಳದ ಸದುಪಯೋಗವನ್ನು ಪಡೆಯಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು