2:16 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್

30/05/2021, 04:35

ಶಿವಮೊಗ್ಗ(reporterkarnataka news) :  ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ತರಕಾರಿ ಖರೀದಿಗೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ತರೆಯಬಹುದು. ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ. ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ. ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು