11:07 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್

30/05/2021, 04:35

ಶಿವಮೊಗ್ಗ(reporterkarnataka news) :  ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ತರಕಾರಿ ಖರೀದಿಗೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ತರೆಯಬಹುದು. ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ. ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ. ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು