11:06 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಮಾಯೊದಪ್ಪೆ ಮಂತ್ರದೇವತೆಗೆ ಮುಹೂರ್ತ: ಕಲಾವಿದೆರ್‌ ಕುಡ್ಲ ತಂಡದಿಂದ ಪೌರಾಣಿಕ ನಾಟಕ

15/06/2022, 20:51

ಮಂಗಳೂರು(reporterkarnataka.com): ಪ್ರಾಪ್ತಿ ಕಲಾವಿದೆರ್‌ ಕುಡ್ಲ ಪ್ರದರ್ಶಿಸಲಿರುವ ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ರಚಿಸಿ ನಿರ್ದೇಶಿಸಿರುವ ಮಾಯೊದಪ್ಪೆ ಮಂತ್ರದೇವತೆ ತುಳು ಪೌರಾಣಿಕ ನಾಟಕದ ಮುಹೂರ್ತ ಕದ್ರಿಮಂಜುನಾಥೇಶ್ವರ ಕ್ಷೇತ್ರದಲ್ಲಿ ನಡೆಯಿತು.

ಪೌರಾಣಿಕ ರಂಗಭೂಮಿಯ ದಿಗ್ಗಜರಾದ ಜಿ.ಕೆ.ರೈ, ಸತೀಶ್‌ ಕದ್ರಿ, ಉದಯ್‌ ಆಚಾರ್‌, ಮಾಧವ ಇರುವೈಲ್‌ ಜತೆ ಸುಹಾನ್‌ ಕುಳಾಯಿ ಮೊದಲಾದ ಯುವ ಕಲಾವಿದರ ಸೇರ್ಪಡೆಯೊಂದಿಗೆ ನಾಟಕ ರಂಗಭೂಮಿ ಪಯಣಕ್ಕೆ ಸಜ್ಜಾಗುತ್ತಿದೆ.


ಮುಹೂರ್ತ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ನಿರ್ದೇಶಕ ಕಿಶೋರ್‌ ಡಿ.ಶೆಟ್ಟಿ ಮಾತನಾಡಿ, ಪೌರಾಣಿಕ ನಾಟಕದ ಕುರಿತು ಪ್ರೇಕ್ಷಕರ ನಿರೀಕ್ಷೆಯೂ ಬೆಟ್ಟದಷ್ಟಿರುತ್ತದೆ, ಖರ್ಚುವೆಚ್ಚ, ಕಷ್ಟ ನಷ್ಟಗಳೂ ಹೆಚ್ಚು, ಕಷ್ಟ ಪಟ್ಟು ದುಡಿದರೆ ರಂಗಭೂಮಿಯಲ್ಲಿ ಹೆಸರು ಅಚ್ಚಳಿಯದೆ ಉಳಿಯುತ್ತದೆ ಎಂದರು.

ಉದ್ಘಾಟಿಸಿದ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮಾತನಾಡಿ, ಸಮೃದ್ಧವಾದ ತುಳು ರಂಗಭೂಮಿಯಲ್ಲಿ ಯುವ ಕಲಾವಿದರಿಗೆ, ಪ್ರಯೋಗಶೀಲರಿಗೆ ಹೆಚ್ಚಿನ ಅವಕಾಶ ಇದೆ, ಇದನ್ನು ಇತ್ತೀಚೆಗೆ ಪೌರಾಣಿಕ ನಾಟಕಗಳು ಮಾಡುತ್ತಿರುವ ಪ್ರದರ್ಶನಗಳ ದಾಖಲೆಯೇ ಹೇಳುತ್ತದೆ ಎಂದರು.

ಕ್ಯಾಟ್ಕ ಸಂಘದ ಅಧ್ಯಕ್ಷ ಮೋಹನ ಕೊಪ್ಪಲ ಮಾತನಾಡಿ, ಕರೋನಾ ಬಳಿಕ ಕಲಾವಿದರಿಗೆ ಮತ್ತೆ ಒಳ್ಳೆಯ ಅವಕಾಶಗಳು ಸಿಗುತ್ತಿದ್ದು, ಸದುಪಯೋಗಪಡಿಸಿಕೊಳ್ಳಿ, ನಾಟಕ ಅತಿ ಹೆಚ್ಚು ಪ್ರದರ್ಶನಗಳನ್ನು ನೀಡಲಿ ಎಂದು ಹಾರೈಸಿದರು.

ನಿರ್ದೇಶಕ ಪ್ರಶಾಂತ್‌ ಸಿ.ಕೆ. ಸ್ವಾಗತಿಸಿದರು. ವಿಜೆ ಮಧುರಾಜ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು