7:44 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

19/09/2024, 22:03

ಮಂಗಳೂರು(reporterkarnataka.com): ನೂತನ ಮೇಯರ್ – ಉಪ ಮೇಯರ್ ಆಯ್ಕೆ ಬಳಿಕ ಅಭಿನಂದನಾ ಸಭೆ ನಡೆಯುತ್ತಿದ್ದಾಗಲೇ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಇಡೀ ಸಭೆ ಸಾಕ್ಷಿಯಾಯಿತು.


ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಅವರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ ಬಳಿಕ ನಿರ್ಗಮನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಭಿನಂದನಾ ಭಾಷಣ ಮಾಡಿದರು.
ಈ ವೇಳೆ ಅವರು ಭಾಷಣ ಮಾಡುತ್ತಿದ್ದಾಗಲೇ ಪ್ರತಿಪಕ್ಷ ಸದಸ್ಯರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಲು ತೆರಳಿದರು. ಇದರಿಂದ ಸಿಡಿಮಿಡಿಗೊಂಡ ಸುಧೀರ್ ಶೆಟ್ಟಿ ಕಣ್ಣೂರು, ‘ಅರ್ಧದಲ್ಲೇ ಯಾಕೆ ಅಭಿನಂದನೆ ಸಲ್ಲಿಸುತ್ತಿದ್ದೀರಿ‌. ಎಸ್‌.ಸಿ. ಸಮುದಾಯದ ಸದಸ್ಯರೋರ್ವರು ಮೇಯರ್ ಆಗಿರುವಾಗ ನೀವು ಹೀಗೆ ಮಾಡುವುದು ಸರಿಯಲ್ಲ’ ಎಂದು ಆಕ್ಷೇಪಣೆ ಎತ್ತಿದ್ದಾರೆ.
ಆಗ ಪ್ರತಿಪಕ್ಷ ಸದಸ್ಯರು ಮಾತನಾಡಿ, ತಾವು ರಾಜ್ಯ ಸರಕಾರವನ್ನು ದೂಷಿಸುವುದು ಸರಿಯಲ್ಲ. ವಿನಾ ಕಾರಣ ಮೇಯರ್ ಅಭಿನಂದನಾ ಸಭೆಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಈಗಾಗಲೇ ಮಾತನಾಡಿರುವ ಎಂಪಿ, ಎಂಎಲ್ಎಗಳು ರಾಜಕೀಯ ಮಾತನಾಡಿಲ್ಲ‌. ತಾವೇಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಈ ನಡುವೆ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಈ ಹಿಂದೆ ಮೇಯರ್ ಅಭ್ಯರ್ಥಿ ಮೀಸಲಾತಿ ನಾಲ್ಕು ಜನರಲ್ ಮೆರಿಟ್‌ಗೆ ಮಾತ್ರವಿತ್ತು. ಆದರೆ ಎಸ್ ಸಿ
ಮೀಸಲಾತಿ ಬರಬೇಕಾದರೆ ನಮ್ಮ ನಿಯೋಗ ನಗರಾಭಿವೃದ್ಧಿ ಸಚಿವರಲ್ಲಿಗೆ ಹೋಗಿ ಅವರ ಮನವೊಲಿಕೆ ಮಾಡಿದ್ದೀರಿ. ಆದ್ದರಿಂದ ಎಸ್ ಸಿ ಮೀಸಲಾತಿ ಬಂದು, ಎಸ್ಸಿ ಸಮುದಾಯದ ಸದಸ್ಯರೊಬ್ಬರು ಇದೀಗ ಮೇಯರ್ ಆಗಿದ್ದಾರೆ. ಆದ್ದರಿಂದ ಎಸ್ ಸಿ ಮೀಸಲಾತಿ ಬರಬೇಕಾದರೆ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಹೇಳಿದರು.
ಬಳಿಕ ಈ ವಾಕ್ಸಮರ ತಣ್ಣಗಾಗಿ, ಅಭಿನಂದನಾ ಸಭೆ ಮತ್ತೆ ಮುಂದುವರಿಯಿತು.

ಇತ್ತೀಚಿನ ಸುದ್ದಿ

ಜಾಹೀರಾತು