5:20 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

19/09/2024, 22:03

ಮಂಗಳೂರು(reporterkarnataka.com): ನೂತನ ಮೇಯರ್ – ಉಪ ಮೇಯರ್ ಆಯ್ಕೆ ಬಳಿಕ ಅಭಿನಂದನಾ ಸಭೆ ನಡೆಯುತ್ತಿದ್ದಾಗಲೇ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರಕ್ಕೆ ಇಡೀ ಸಭೆ ಸಾಕ್ಷಿಯಾಯಿತು.


ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಅವರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ ಬಳಿಕ ನಿರ್ಗಮನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಭಿನಂದನಾ ಭಾಷಣ ಮಾಡಿದರು.
ಈ ವೇಳೆ ಅವರು ಭಾಷಣ ಮಾಡುತ್ತಿದ್ದಾಗಲೇ ಪ್ರತಿಪಕ್ಷ ಸದಸ್ಯರು ನೂತನ ಮೇಯರ್-ಉಪ ಮೇಯರ್‌ಗಳಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಲು ತೆರಳಿದರು. ಇದರಿಂದ ಸಿಡಿಮಿಡಿಗೊಂಡ ಸುಧೀರ್ ಶೆಟ್ಟಿ ಕಣ್ಣೂರು, ‘ಅರ್ಧದಲ್ಲೇ ಯಾಕೆ ಅಭಿನಂದನೆ ಸಲ್ಲಿಸುತ್ತಿದ್ದೀರಿ‌. ಎಸ್‌.ಸಿ. ಸಮುದಾಯದ ಸದಸ್ಯರೋರ್ವರು ಮೇಯರ್ ಆಗಿರುವಾಗ ನೀವು ಹೀಗೆ ಮಾಡುವುದು ಸರಿಯಲ್ಲ’ ಎಂದು ಆಕ್ಷೇಪಣೆ ಎತ್ತಿದ್ದಾರೆ.
ಆಗ ಪ್ರತಿಪಕ್ಷ ಸದಸ್ಯರು ಮಾತನಾಡಿ, ತಾವು ರಾಜ್ಯ ಸರಕಾರವನ್ನು ದೂಷಿಸುವುದು ಸರಿಯಲ್ಲ. ವಿನಾ ಕಾರಣ ಮೇಯರ್ ಅಭಿನಂದನಾ ಸಭೆಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಈಗಾಗಲೇ ಮಾತನಾಡಿರುವ ಎಂಪಿ, ಎಂಎಲ್ಎಗಳು ರಾಜಕೀಯ ಮಾತನಾಡಿಲ್ಲ‌. ತಾವೇಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಈ ನಡುವೆ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಈ ಹಿಂದೆ ಮೇಯರ್ ಅಭ್ಯರ್ಥಿ ಮೀಸಲಾತಿ ನಾಲ್ಕು ಜನರಲ್ ಮೆರಿಟ್‌ಗೆ ಮಾತ್ರವಿತ್ತು. ಆದರೆ ಎಸ್ ಸಿ
ಮೀಸಲಾತಿ ಬರಬೇಕಾದರೆ ನಮ್ಮ ನಿಯೋಗ ನಗರಾಭಿವೃದ್ಧಿ ಸಚಿವರಲ್ಲಿಗೆ ಹೋಗಿ ಅವರ ಮನವೊಲಿಕೆ ಮಾಡಿದ್ದೀರಿ. ಆದ್ದರಿಂದ ಎಸ್ ಸಿ ಮೀಸಲಾತಿ ಬಂದು, ಎಸ್ಸಿ ಸಮುದಾಯದ ಸದಸ್ಯರೊಬ್ಬರು ಇದೀಗ ಮೇಯರ್ ಆಗಿದ್ದಾರೆ. ಆದ್ದರಿಂದ ಎಸ್ ಸಿ ಮೀಸಲಾತಿ ಬರಬೇಕಾದರೆ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಹೇಳಿದರು.
ಬಳಿಕ ಈ ವಾಕ್ಸಮರ ತಣ್ಣಗಾಗಿ, ಅಭಿನಂದನಾ ಸಭೆ ಮತ್ತೆ ಮುಂದುವರಿಯಿತು.

ಇತ್ತೀಚಿನ ಸುದ್ದಿ

ಜಾಹೀರಾತು