5:22 PM Monday31 - March 2025
ಬ್ರೇಕಿಂಗ್ ನ್ಯೂಸ್
PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ…

ಇತ್ತೀಚಿನ ಸುದ್ದಿ

ಎಂ.ಕಾಂ ಪರೀಕ್ಷೆ: ಕುಡ್ಲದ ಪೊಣ್ಣು, ನಟಿ- ನಿರೂಪಕಿ ಶೀತಲ್ ಮಂಗಳೂರು ಪ್ರಥಮ Rank

18/04/2022, 21:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ,ನಟಿ, ನಿರೂಪಕಿ ಶೀತಲ್ ಅವರು ಎಂ.ಕಾಂ ಪರೀಕ್ಷೆಯಲ್ಲಿ ಪ್ರಥಮ rank ಪಡೆದಿದ್ದಾರೆ.


ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿ ವರೆಗೆ ವಿದ್ಯಾಭ್ಯಾಸವನ್ನು ಪೂರೈಸಿದ ಅವರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಎಂ.ಕಾಂ ಶಿಕ್ಷಣ ಪಡೆದರು.


ಅತೀ ಸಣ್ಣ ವಯಸ್ಸಿನಲ್ಲಿ ತುಳು ರಂಗಭೂಮಿ ಪ್ರವೇಶಿಸಿದರು. ನಾಯಕಿ ನಟಿಯಾಗಿ ನಟನೆಯಲ್ಲೂ ಎತ್ತಿದ ಕೈ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಖಾಸಗಿ ಟಿವಿ ವಾಹಿನಿಯಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿದರು.

ಈಕೆ ಕೆ.ಪ್ರಕಾಶ್ ಹಾಗೂ ಗೀತಾ ದಂಪತಿಯ ಏಕೈಕ ಪುತ್ರಿ. ಪ್ರಸ್ತುತ ಅವರು ಎ. ಜೆ. ಸಂಸ್ಥೆಯಲ್ಲಿ  ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ನಟನೆಯಿಂದ ದೂರ ಸರಿದಿದ್ದಾರೆ.


ಬೇರೆ ಭಾಷೆಗಳಲ್ಲಿ ನಟನೆ ಮಾಡುವ ಆಸಕ್ತಿ ಸದ್ಯಕ್ಕಿಲ್ಲ. ತುಳು ಭಾಷೆಯ ಮೇಲೆ ಅಭಿಮಾನ ಮತ್ತು ಪ್ರೀತಿ ಇದೆ. ಹಾಗಾಗಿ ಅವಕಾಶ ಸಿಕ್ಕಾಗ ಬಳಸಿಕೊಂಡೆ. ನಟಿಯಾಗಬೇಕೆಂಬ ಕನಸು ಯಾವತ್ತು ಕಂಡಿಲ್ಲ. ಕಾಲೇಜು ಜೀವನದಲ್ಲಿ ನಟನೆಯಿಂದ ಬರುತ್ತಿದ್ದ ಹಣ ನನ್ನ ವಿದ್ಯಾಭ್ಯಾಸಕ್ಕೆ ಸಹಾಯವಾಗುತ್ತಿತ್ತು. ಮೊದಲು ಓದಿಗೆ ಪ್ರಾಮುಖ್ಯತೆ, ಆಮೇಲೆ ಇತರ ವಿಷಯಕ್ಕೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಅವರು ನುಡಿದರು.

ನನ್ನ ತಂದೆ-ತಾಯಿ ಯಾವತ್ತು ಒತ್ತಡ ಮಾಡಿಲ್ಲ ಇಷ್ಟೇ ಅಂಕ ಗಳಿಸಬೇಕು ಅಥವಾ ಇದೇ ಫೀಲ್ಡಿಗೆ ಹೋಗಬೇಕು ಎಂದು ಒತ್ತಡ ಹೇರಿಲ್ಲ.


ಯಾವುದೇ ರಂಗಕ್ಕೆ ಹೋಗು ನಮ್ಮ ಸಹಾಯ ಇದೆ ಎಂದು ಇವತ್ತಿಗೂ ಬೆನ್ನು ತಟ್ಟುತ್ತಿರುವ ತಂದೆ-ತಾಯಿಯೇ ನನಗೆ ಸ್ಪೂರ್ತಿ ಎಂದು ಶೀತಲ್ ಹೇಳುತ್ತಾರೆ. ನನಗೆ ಸಹಕಾರ ನೀಡಿದ ಎಲ್ಲಾ ಶಿಕ್ಷಕರಿಗೂ ಹಾಗೂ ನನಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ.



ದಬಕ್ ದಬ ಐಸಾ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಮೆಹಂದಿ ಆರ್ಟಿಸ್ಟ್, ಡ್ಯಾನ್ಸರ್ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು