9:35 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆಯೆ?: ಸಾಮಾಜಿಕ ಕಾರ್ಯಕರ್ತ ಜೆರಾಲ್ಡ್ ಟವರ್ಸ್ ಹೇಳಿದ್ದೇನು?

24/03/2022, 23:46

ಮಂಗಳೂರು(reporterkarnataka.com):  ಮಂಗಳೂರು ಕೆಥೋಲಿಕ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷ ಅನಿಲ್ ಕುಮಾರ್ ಲೋಬೋ ಹಾಗೂ ನಿರ್ದೇಶಕ ಜೋಸೆಫ್ ಎಂ. ಅನಿಲ್ ಪತ್ರಾವೋ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅಧಿಕಾರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಬ್ಯಾಂಕ್ ಸದಸ್ಯ ಜೆರಾರ್ಡ್ ಟವರ್ಸ್ ಆರೋಪಿಸಿದ್ದಾರೆ. 

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಕ್ಷಣವೇ ಈ ಇಬ್ಬರನ್ನು ಅಧಿಕಾರದಿಂದ ಅನರ್ಹತೆಗೊಳಿಸಬೇಕು ಹಾಗೂ ಇದೆಲ್ಲಕ್ಕೂ ಬೆಂಬಲವಾಗಿ ನಿಂತ ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್ ಅವರನ್ನು ತಕ್ಷಣದಿಂದ ವಜಾಗೊಳಿಸಬೇಕು. ಸಹಕಾರ ಸಂಘಗಳ ರಿಜಿಸ್ಟ್ರಾರ್ ತಕ್ಷಣವೇ ಇವರ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಎಂಸಿಸಿ ಬ್ಯಾಂಕ್ ನ ಪ್ರಸ್ತುತ ಅಧ್ಯಕ್ಷ ಅನಿಲ್ ಲೋಬೋ ತಮ್ಮ ಸ್ನೇಹಿತರಿಗೆ ಕೋಟ್ಯಂತರ ರೂಪಾಯಿ ಸಾಲ ನೀಡಿದ ಮರುಕ್ಷಣದಲ್ಲೇ ಅದರಲ್ಲಿ ನಿಗದಿತ ಮೊತ್ತ ಅನಿಲ್ ಲೋಬೋ ಹಾಗೂ ಅವರ ಪತ್ನಿ ಹೆಸರಿಗೆ ಜಮಾವಣೆ ಆಗಿದೆ. ಅಲ್ಲದೇ ಬ್ಯಾಂಕ್ ನಲ್ಲಿ ನೇಮಿಸಲಾದ ಐಟಿ ವಿಭಾಗದ ಸಿಬ್ಬಂದಿಗಳು ಅನಿಲ್ ಲೋಬೋ ಅವರ ನಿಕಟ ಸಂಬಂಧಿಗಳಾಗಿದ್ದಾರೆ ಎಂದು ಜೆರಾರ್ಡ್ ಅಂಕಿ ಅಂಶ ಸಮೇತ ಆರೋಪಿಸಿದ್ದಾರೆ. ಈ ಬಗ್ಗೆ ಆರ್.ಬಿ.ಐ ಗಮನಕ್ಕೂ ಬಂದಿದ್ದು ರಿಸರ್ವ್ ಬ್ಯಾಂಕಿನ ಮೇಲ್ವಿಚಾರಣ ಇಲಾಖೆಯು ತನಿಖೆಗಾಗಿ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದ್ದರೂ ತನಿಖೆ ನಡೆದಿಲ್ಲ. ಇನ್ನೊಂದೆಡೆ ನಿರ್ದೇಶಕ ಜೋಸೆಫ್ ಎಂ. ಅನಿಲ್ ಪತ್ರಾವೋ ಕೂಡಾ ಸ್ನೇಹಿತರೋರ್ವರಿಗೆ ಸೂಕ್ತ ದಾಖಲೆಗಳಿಲ್ಲದೇ ಕೋಟ್ಯಂತರ ರೂಪಾಯಿ ಸಾಲ ನೀಡಿದ್ದಾರೆ. ಈ ಮೂಲಕ ಇವರಿಬ್ಬರು ಆರ್.ಬಿ.ಐ ಹಾಗೂ ಆರ್.ಸಿ,ಎಸ್. ನಿಯಮಗಳನ್ನು ಉಲ್ಲಂಘಿಸಿದ್ದಾಗಿ ತಿಳಿಸಿದ್ದಾರೆ.

ಅವ್ಯವಹಾರದ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಖಾದರ್ ಅವರಿಗೂ ಪತ್ರ ಬರೆಯಲಾಗಿದ್ದು, ಆದರೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಟವರ್ಸ್ ತಿಳಿಸಿದರು.

ಸ್ಟೀವನ್ ಡಿಸೋಜ, ಯೂಜಿನ್ ಲೋಬೋ ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು