9:35 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಎಂಸಿಎಫ್ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ: ಅಂತಾರಾಷ್ಟ್ರೀಯ ಗುಣಮಟ್ಟದ ಕೃತಕ ಅಂಗಾಂಗಗಳ ವ್ಯವಸ್ಥೆ

04/01/2024, 23:07

ಮಂಗಳೂರು(reporterkarnataka.com):ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಅವರ ಶಿಫಾರಸ್ಸಿನಂತೆ ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ಸುರತ್ಕಲ್ ಅಥರ್ವ ಆಸ್ಪತ್ರೆಯ ಡಾ.ಪ್ರಶಾಂತ್ ಮೋಹನ್ ಅವರು ಫಲಾನುಭವಿಗಳಿಗೆ ಕೃತಕ ಅಂಗಾಂಗ ಜೋಡಣಾ ಸಲಕರಣೆ ವಿತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಳೆದ ಐದು ವರ್ಷಗಳಲ್ಲಿ ಅಗತ್ಯವುಳ್ಳವರಿಗೆ ಅಂತಾರಾಷ್ರ್ಟೀಯ ಗುಣಮಟ್ಟದ ಕೃತಕ ಅಂಗಾಂಗ ಜೋಡಣೆಯ ವ್ಯವಸ್ಥೆಯನ್ನು ಮಾಡುವ ಮೂಲಕ ಎಂಸಿಎಫ್ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ ಎಂದು ಶ್ಲಾಘಿಸಿದರು. ಕ್ಲಾಸ್ ರೂಂ ನವೀಕರಣ, ಅಂಗನವಾಡಿ ಕೇಂದ್ರದ ನವೀಕರಣ, ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಟ್ರೋಲಿ, ಆಮ್ಲಜನಕ ಉತ್ಪಾದನಾ ಘಟಕ ಸೇರಿದಂತೆ ವಿವಿಧ ಸಹಾಯ, ಸಹಕಾರ ಮತ್ತು ಅಭಿವೃದ್ಧಿ ಕಾರ್ಯಗಳು ನಡೆದಿವೆ ಸಂಸ್ಥೆಗೆ ಈ ಸಂದರ್ಭದಲ್ಲಿ ಕೃತಜ್ನತೆ ಅರ್ಪಿಸುವುದಾಗಿ ಶಾಸಕರು ನುಡಿದರು.
ಎಂಸಿಎಫ್‍ನ ಸಿಇಒ ಆಗಿರುವ ನಿತಿನ್ ಎಂ. ಕಾಂತಕ್ ಅವರು ಮಾತನಾಡಿ, ಸಿಎಸ್‍ಆರ್ ನಿಧಿಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆ ಜಾರಿಗೆ ಮುಂದೆಯೂ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಸ್ಥ ಗಿರೀಶ್ ಎಸ್. ಅವರು ಸಿಎಸ್‍ಆರ್ ಯೋಜನೆಯ ಕುರಿತಂತೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ,ಎಂಸಿಎಫ್‍ನ ಪ್ರಮುಖ ಅಧಿಕಾರಿಗಳು,ಸಿಎಸ್‍ಆರ್ ವಿಭಾಗದ ಅಧಿಕಾರಿಗಳು,ಎಂಡೋಲೈಟ್ ಸಂಸ್ಥೆಯ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ಚೇತನ್ ಮೆಂಡೋನ್ಸಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು